ಅಜ್ಮೇರ್‌ ದರ್ಗಾಕ್ಕೆ ವಿಶೇಷ ಚಾದರ್ ಸಮರ್ಪಿಸಿದ ಪ್ರಧಾನಿ‌ ನರೇಂದ್ರ ಮೋದಿ

ಮಂಗಳೂರು(ಹೊಸದಿಲ್ಲಿ): ಪ್ರಧಾನಿ ನರೇಂದ್ರ ಮೋದಿ ಅವರು ರಾಜಸ್ಥಾನದ ಅಜ್ಮೇರ್‌ನಲ್ಲಿರುವ ಖ್ವಾಜಾ ಮೊಯಿನುದ್ದೀನ್‌ ಚಿಸ್ತಿಗೆ ವಿಶೇಷ ಚಾದರ್ ಸಮರ್ಪಿಸಿದ್ದಾರೆ.

ಹೊಸದಿಲ್ಲಿಯಲ್ಲಿ ಮುಸ್ಲಿಂ ಸಮುದಾಯದ ಪ್ರಮುಖ ನಾಯಕರು ಜ.11ರಂದು ಭೇಟಿಯಾಗಿ ಮಾತುಕತೆ ನಡೆಸಿದ್ದರು. ಈ ಸಂದರ್ಭದಲ್ಲಿ ಪ್ರಧಾನಿ ನರೇಂದ್ರ ಮೋದಿ ಸಮುದಾಯದ ಮುಖಂಡರ ಮೂಲಕ ವಿಶೇಷ ಚಾದರ್ ಅರ್ಪಿಸಿದ್ದಾರೆ. ಅದನ್ನು ಶೀಘ್ರದಲ್ಲಿಯೇ ನಡೆಯಲಿರುವ ಉರೂಸ್‌ನಲ್ಲಿ ಅರ್ಪಿಸಲಾಗುವುದು ಎಂದು ಹೇಳಲಾಗಿದೆ. ಈ ಬಗ್ಗೆ ಖುದ್ದು ಪ್ರಧಾನಿಯವರೇ ಎಕ್ಸ್‌ ಖಾತೆಯಲ್ಲಿ ಮಾಹಿತಿ ನೀಡಿದ್ದಾರೆ. ಕೇಂದ್ರ ಅಲ್ಪಸಂಖ್ಯಾತರ ವ್ಯವಹಾರಗಳ ಸಚಿವೆ ಸ್ಮೃತಿ ಇರಾನಿ ಮತ್ತು ಬಿಜೆಪಿ ಅಲ್ಪಸಂಖ್ಯಾತರ ಮೋರ್ಚಾದ ಅಧ್ಯಕ್ಷ ಜಮಾಲ್‌ ಸಿದ್ಧಿಕಿ ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.

 

LEAVE A REPLY

Please enter your comment!
Please enter your name here