ನೇಣು ಬಿಗಿದು ಯುವಕ ಆತ್ಮಹತ್ಯೆ-ಆರ್ಥಿಕ ಅಡಚಣೆಯಿಂದ ಆತ್ಮಹತ್ಯೆ ಮಾಡಿಕೊಂಡಿರುವ ಶಂಕೆ

ಮಂಗಳೂರು(ಉಳ್ಳಾಲ): ಅವಿವಾಹಿತ ಯುವಕನೊಬ್ಬ ತನ್ನ ಮನೆಯಲ್ಲಿ ನೇಣುಬಿಗಿದು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಕೋಟೆಕಾರು ಬಳಿಯ ಮಾಡೂರಿನಲ್ಲಿ ಜ.16ರ ಬೆಳಿಗ್ಗೆ ನಡೆದಿದೆ. ಮಾಡೂರು ಅಯ್ಯಪ್ಪ ಭಜನಾ ಮಂದಿರ ಸಮೀಪದ ನಿವಾಸಿ ನಾಗರಾಜ್ ಶೆಟ್ಟಿ (32) ಆತ್ಮಹತ್ಯೆ ಗೈದ ಯುವಕ.

ಆನ್ ಲೈನ್ ಸಂಸ್ಥೆಯೊಂದರಲ್ಲಿ ಉದ್ಯೋಗದಲ್ಲಿದ್ದ ನಾಗರಾಜ್ ನಿನ್ನೆ ಕೆಲಸಕ್ಕೆ ತೆರಳಿ ರಾತ್ರಿ ಕೋಣೆಯಲ್ಲಿ ಮಲಗಿದ್ದರು ಎನ್ನಲಾಗಿದೆ. ಬೆಳಿಗ್ಗೆ ಕೋಣೆ ಬಾಗಿಲು ತೆರೆಯದೇ ಇರುವುದನ್ನು ಗಮನಿಸಿದ ನಾಗರಾಜ್ ತಮ್ಮ ನಿಶಾನ್ ಕಿಟಕಿ ಮೂಲಕ ನೋಡುವಾಗ ನಾಗರಾಜ್ ಫ್ಯಾನಿಗೆ ನೇಣು ಬಿಗಿದುಕೊಂದು ಆತ್ಮಹತ್ಯೆ ಮಾಡಿಕೊಂಡಿರುವುದು ಬೆಳಕಿಗೆ ಬಂದಿದೆ. ಈ ಹಿಂದೆ ಚೆಂಬುಗುಡ್ಡೆಯಲ್ಲಿದ್ದ ಕುಟುಂಬ ಐದು ವರ್ಷಗಳ ಹಿಂದಷ್ಟೇ ಮಾಡೂರು ಸಮೀಪ ಮನೆಯನ್ನು ಖರೀದಿಸಿ ನೆಲೆಸಿದ್ದರು. ಕಿರಿಯ ಸಹೋದರನಿಗೂ ವಿವಾಹ ನಿಶ್ಚಯವಾಗಿದ್ದು, ನಾಗರಾಜ್ ಮಾತ್ರ ವಿವಾಹವಾಗುವುದಿಲ್ಲ ಎಂದು ಉಳಿದಿದ್ದರು. ಆರ್ಥಿಕ ಅಡಚಣೆ ಆತ್ಮಹತ್ಯೆಗೆ ಕಾರಣವಾಗಿರಬಹುದು ಎನ್ನುವ ಸಂಶಯ ವ್ಯಕ್ತಪಡಿಸಲಾಗಿದೆ. ಉಳ್ಳಾಲ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

LEAVE A REPLY

Please enter your comment!
Please enter your name here