ಬೆಳ್ಳಂಬೆಳಿಗ್ಗೆ ನಡೆದ ಘಟನೆ-ನಿಂತಿದ್ದ ಟ್ರ್ಯಾಕ್ಟರ್‌ಗೆ ಕಾರು ಡಿಕ್ಕಿ, ನಾಲ್ವರ ಸಾವು

ಮಂಗಳೂರು(ಬಾಗಲಕೋಟೆ): ಜಿಲ್ಲೆಯ ತುಂಬರಮಟ್ಟಿ ಕ್ರಾಸ್ ಬಳಿ ಕಬ್ಬು ತುಂಬಿಕೊಂಡು ನಿಂತಿದ್ದ ಟ್ರ್ಯಾಕ್ಟರ್‌ಗೆ ಕಾರು ಡಿಕ್ಕಿ ಹೊಡೆದು ನಾಲ್ಚರು ಮೃತಪಟ್ಟಿದ್ದಾರೆ.

ಹುಬ್ಬಳ್ಳಿ ಸೋಲ್ಲಾಪುರ ರಾಷ್ಟ್ರೀಯ ಹೆದ್ದಾರಿಯಲ್ಲಿ ಬೆಳಗಿನ ಜಾವ ನಾಲ್ಕು ಗಂಟೆಗೆ ಅವಘಡ ಸಂಭವಿಸಿದ್ದು, ಘಟನೆಯಲ್ಲಿ ಮಲ್ಲು ಪೂಜಾರಿ (24), ಕಲ್ಲಪ್ಪ ಕೌಟಗಿ, (34), ಕಾಮಾಕ್ಷಿ ಬಡಿಗೇರ (35), ತುಕಾರಾಮ್ ತಳೇವಾಡ (30) ಎಂಬುವವರು ಮೃತರಾಗಿದ್ದಾರೆ. ಮೃತರನ್ನು ವಿಜಯಪುರ ಜಿಲ್ಲೆಯ ಹೊನಗನಹಳ್ಳಿ ಗ್ರಾಮದವರು ಎಂದು ಗುರುತಿಸಲಾಗಿದೆ. ಬಾಗಲಕೋಟೆ ಎಸ್.ಪಿ. ಅಮರನಾಥ ರೆಡ್ಡಿ ಭೇಟಿ ನೀಡಿದ್ದು ಪರಿಶೀಲನೆ ನಡೆಸಿದರು.

LEAVE A REPLY

Please enter your comment!
Please enter your name here