ಹಿಮಾಚಲದಲ್ಲಿ ಕಾರು ಅಪಘಾತ- ಚೆನ್ನೈ ಮಾಜಿ ಮೇಯರ್ ಪುತ್ರ ನಾಪತ್ತೆ

ಮಂಗಳೂರು(ಶಿಮ್ಲಾ): ಕಾರೊಂದು ಚಾಲಕನ ನಿಯಂತ್ರಣ ತಪ್ಪಿ ಸಟ್ಲೆಜ್ ನದಿಗೆ ಬಿದ್ದ ಪರಿಣಾಮ ಚೆನ್ನೈನ ಮಾಜಿ ಮೇಯರ್ ಸೈದೈ ದೊರೈಸಾಮಿ ಅವರ ಪುತ್ರ ನಾಪತ್ತೆಯಾಗಿರುವ ಘಟನೆ ಹಿಮಾಚಲ ಪ್ರದೇಶದ ಕಿನ್ನೌರ್ ಜಿಲ್ಲೆಯಲ್ಲಿ ಸಂಭವಿಸಿದೆ.

ಫೆ.4ರಂದು ಈ ಘಟನೆ ನಡೆದಿದ್ದು, ವೆಟ್ರಿ ದೊರೈಸಾಮಿ (45) ಅವರು ತಮ್ಮ ಸಹ ಪ್ರಯಾಣಿಕ ಗೋಪಿನಾಥ್ ಅವರೊಂದಿಗೆ ಕಾರಿನಲ್ಲಿ ಪ್ರಯಾಣಿಸುತ್ತಿದ್ದರು. ಘಟನೆಯ ವೇಳೆ ಹಿಮಾಚಲ ಪ್ರದೇಶದ ಟಬೋ ನಿವಾಸಿ ತೆಂಜಿನ್ ಎಂಬಾತ ಕಾರು ಚಲಾಯಿಸುತ್ತಿದ್ದ ಎನ್ನಲಾಗಿದೆ. ದೊರೈಸ್ವಾಮಿ ಮತ್ತು ಗೋಪಿನಾಥ್ ಕಣಿವೆ ಪ್ರದೇಶದಲ್ಲಿ ಸಂಚರಿಸುವ ವೇಳೆ ಚಾಲಕನ ನಿಯಂತ್ರಣ ತಪ್ಪಿ ಕಾರು ನದಿಗೆ ಬಿದ್ದಿದೆ. ಪರಿಣಾಮ ಕಾರು ಚಾಲನೆ ಮಾಡುತ್ತಿದ್ದ ತೆಂಜಿನ್ ಸ್ಥಳದಲ್ಲೇ ಮೃತಪಟ್ಟಿದ್ದಾರೆ, ಗೋಪಿನಾಥ್ ಅವರನ್ನು ರಕ್ಷಣಾ ತಂಡ ರಕ್ಷಿಸಿದ್ದು, ಸದ್ಯ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಆದರೆ ದೊರೈಸಾಮಿ ನಾಪತ್ತೆಯಾಗಿದ್ದು ರಕ್ಷಣಾ ತಂಡ ಹುಡುಕುವ ಪ್ರಯತ್ನ ನಡೆಸುತ್ತಿವೆ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.

LEAVE A REPLY

Please enter your comment!
Please enter your name here