ಸಂಸದ ನಳಿನ್ ಕುಮಾರ್ ಕಟೀಲು ಮನೆಗೆ ಮುತ್ತಿಗೆ ಹಾಕುವ ಯತ್ನಿಸಿದ ಎನ್ಎಸ್ ಯುಐ ಕಾರ್ಯಕರ್ತರ ಬಂಧನ

ಮಂಗಳೂರು: ಜಿಲ್ಲೆಗೆ ಅನುದಾನ ತರುವಲ್ಲಿ ವಿಫಲವಾಗಿದ್ದಾರೆ. ಯಾವುದೇ ಅಭಿವೃದ್ಧಿ ಕಾರ್ಯವನ್ನು ಮಾಡಿಲ್ಲ ಎಂದು ಎನ್ಎಸ್ ಯುಐ ಕಾರ್ಯಕರ್ತರು ದಕ್ಷಿಣ ಕನ್ನಡ ಜಿಲ್ಲಾ ಸಂಸದ ನಳಿನ್ ಕುಮಾರ್ ಕಟೀಲು ಮನೆಗೆ ಮುತ್ತಿಗೆ ಹಾಕುವ ಯತ್ನ ನಡೆಸಿದ್ದಾರೆ.

ಪ್ರತಿಭಟನೆ ಹಿನ್ನಲೆಯಲ್ಲಿ ಸಂಸದರ ಮನೆಯ ಬಳಿ ಹೆಚ್ಚಿನ ಭದ್ರತೆ ಮಾಡಲಾಗಿದ್ದು, ರಸ್ತೆಯಲ್ಲಿ ಬ್ಯಾರಿಕೇಡ್‌ ಅಳವಡಿಸಲಾಗಿತ್ತು. ಸಂಸದರ ಮನೆಗೆ ಮುತ್ತಿಗೆ ಹಾಕಲು ಅವಕಾಶ ನೀಡದ ಉರ್ವ ಠಾಣಾಧಿಕಾರಿ ಭಾರತಿ ಅವರಲ್ಲಿ ಎನ್ಎಸ್ ಯುಐ ಜಿಲ್ಲಾಧ್ಯಕ್ಷ ಸುಹಾನ್ ಆಳ್ವ ಆಕ್ರೋಶ ವ್ಯಕ್ತಪಡಿಸಿ ಬ್ಯಾರಿಕೇಡ್‌ ತಳ್ಳಿ ಮುತ್ತಿಗೆ ಹಾಕುವ ಪ್ರಯತ್ನವನ್ನು ಪೊಲೀಸರು ವಿಫಲಗೊಳಿಸಿದ್ದಾರೆ. ನಳಿನ್ ಹಠಾವೋ ದೇಶ್ ಬಚಾವೋ ಎಂದು ಘೋಷಣೆ ಕೂಗಿ ಮುತ್ತಿಗೆ ಹಾಕಲು ಪ್ರಯತ್ನಿಸಿದ ಸುಮಾರು 25ರಷ್ಟು ಎನ್‌ ಎಸ್‌ ಯು ಐ ಕಾರ್ಯಕರ್ತರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.

LEAVE A REPLY

Please enter your comment!
Please enter your name here