ಶಾಸಕ ಅಶೋಕ್ ರೈ ನೇತೃತ್ವದಲ್ಲಿ ಅಡ್ಯಾರ್‌ ಕಾಂಗ್ರೆಸ್‌ ಸಮಾವೇಶಕ್ಕೆ ತೆರಳಿದ ಕಾರ್ಯಕರ್ತರ ದಂಡು

ಪುತ್ತೂರು: ಲೋಕಸಭಾ ಚುನಾವಣೆಗೆ ರಾಜಕೀಯ ಪಕ್ಷಗಳು ಭರದ ಸಿದ್ಧತೆ ಆರಂಭಿಸಿದ್ದು ರಾಜ್ಯದ ಆಡಳಿತಾರೂಢ ಕಾಂಗ್ರೆಸ್ ಪಕ್ಷದ ರಾಜ್ಯ ಮಟ್ಟದ ಸಮಾವೇಶ ಇಂದು ಮಂಗಳೂರು ಹೊರವಲಯದ ಅಡ್ಯಾರ್‌ ನ ಸಹ್ಯಾದ್ರಿ ಮೈದಾನದಲ್ಲಿ ನಡೆಯಲಿದೆ. ಅಪರಾಹ್ನ 2 ಗಂಟೆಗೆ ನಡೆಯಲಿರುವ ಸಮಾವೇಶದಲ್ಲಿ ಜಿಲ್ಲೆಯ ಎಲ್ಲೆಡೆಯಿಂದ ಕಾಂಗ್ರೆಸ್‌ ಪದಾಧಿಕಾರಿಗಳು ಮತ್ತು ಕಾರ್ಯಕರ್ತರು ಭಾಗವಹಿಸಲಿದ್ದಾರೆ.

ಪುತ್ತೂರು ಶಾಸಕ ಅಶೋಕ್ ಕುಮಾರ್‌ ರೈ ನೇತೃತ್ವದಲ್ಲಿ ಪುತ್ತೂರಿನಿಂದ ಸುಮಾರು 15 ಸಾವಿರ ಜನರು ಸಮಾವೇಶದಲ್ಲಿ ಭಾಗವಹಿಸಲಿದ್ದಾರೆ ಎನ್ನಲಾಗಿದ್ದು, ದರ್ಬೆಯ ಬೈಪಾಸ್‌ ರಸ್ತೆಯಲ್ಲಿರುವ ಶಾಸಕರ ಚುನಾವಣಾ ಕಚೇರಿ ಬಳಿ ಬಂದು ಸೇರಿದ ಕಾರ್ಯಕರ್ತರು ಸುಮಾರು 40 ಬಸ್ ಮತ್ತು ಇತರ ವಾಹನಗಳಲ್ಲಿ ಅಡ್ಯಾರ್‌ ಗೆ ಪ್ರಯಾಣಬೆಳೆಸಿದ್ದಾರೆ. ಶಾಸಕ ಅಶೋಕ್‌ ರೈ ತೆಂಗಿನ ಕಾಯಿ ಒಡೆಯುವ ಮೂಲಕ ಪ್ರಯಾಣಕ್ಕೆ ಚಾಲನೆ ನೀಡಿದರು.

 

LEAVE A REPLY

Please enter your comment!
Please enter your name here