ಶ್ರೀ ವೆಂಕಟರಮಣ ದೇವಸ್ಥಾನದಲ್ಲಿ ಸಾವಿರಾರು ಭಕ್ತರ ಸಮ್ಮುಖದಲ್ಲಿ ಅದ್ದೂರಿ ‘ಮಂಗಳೂರು ರಥೋತ್ಸವ’

ಮಂಗಳೂರು: ಮಂಗಳೂರು ನಗರದ ರಥಬೀದಿಯಲ್ಲಿರುವ ಇತಿಹಾಸ ಪ್ರಸಿದ್ದ ಶ್ರೀ ವೆಂಕಟರಮಣ ದೇವಸ್ಥಾನದ ”ಮಂಗಳೂರು ರಥೋತ್ಸವ” ಸಹಸ್ರಾರು ಭಜಕರ ಸಮ್ಮುಖದಲ್ಲಿ ವಿಜೃಂಭಣೆಯಿಂದ ಜರಗಿತು.

ಬ್ರಹ್ಮರಥೋತ್ಸವ ಪ್ರಯುಕ್ತ ಬೆಳಿಗ್ಗೆ ಮಹಾಪ್ರಾರ್ಥನೆಯೊಂದಿಗೆ ಪ್ರಾರಂಭಗೊಂಡು ಶ್ರೀ ದೇವರಿಗೆ ಶತಕಲಶಾಭಿಷೇಕ, ಗಂಗಾಭಿಷೇಕ, ಪುಳಕಾಭಿಷೇಕ ಕಾಶಿ ಮಠ ಸಂಸ್ಥಾನದ ಮಠಾಧೀಶರಾದ ಶ್ರೀಮದ್ ಸಂಯಮಿಂದ್ರ ತೀರ್ಥ ಸ್ವಾಮೀಜಿಯವರ ದಿವ್ಯ ಹಸ್ತಗಳಿಂದ ನೆರವೇರಿತು.

ಯಜ್ಞಮಂಟಪದಲ್ಲಿ ಮಹಾಯಜ್ಞ ಮಹಾ ಪೂರ್ಣಾಹುತಿ ಬಳಿಕ ಶ್ರೀ ದೇವರು ಸ್ವರ್ಣ ಪಲ್ಲಕಿಯಲ್ಲಿ ವಿರಾಜಮಾನರಾಗಿ ಭವ್ಯ ಬ್ರಹ್ಮರಥದಲ್ಲಿ ರಥಾರೂಢರಾಗಿ ಮಂಗಳೂರು ರಥೋತ್ಸವ ನೆರವೇರಿತು. ದೇಶ ವಿದೇಶಗಳಿಂದ ಗೌಡ ಸಾರಸ್ವತ ಸಮಾಜದ ಸಹಸ್ರಾರು ಪಾಲ್ಗೊಂಡು ಪುನೀತರಾದರು.

 

LEAVE A REPLY

Please enter your comment!
Please enter your name here