ಬ್ಯಾಗ್​​​​​ನಲ್ಲಿದ್ದ ವಸ್ತು ಸ್ಫೋಟ-ಹಲವರಿಗೆ ಗಾಯ, ಪ್ರಕರಣ ದಾಖಲು

ಮಂಗಳೂರು(ಶಿವಮೊಗ್ಗ): ಬ್ಯಾಗ್​​​​​ನಲ್ಲಿದ್ದ ವಸ್ತು ಸ್ಫೋಟಗೊಂಡು ಹಲವರಿಗೆ ಗಾಯಗಳಾಗಿರುವ ಘಟನೆ ಜಿಲ್ಲೆಯ ಶಿಕಾರಿಪುರ ತಾಲೂಕಿನ ಶಿರಾಳಕೊಪ್ಪಳದಲ್ಲಿ ನಡೆದಿದೆ. ಬೆಡ್​​ಶೀಟ್​ ಮಾರಲು ಬಂದಿದ್ದ ಆಂಥೋಣಿ ಎಂಬಾತ ಸೇರಿದಂತೆ ಇತರೆ ಬೆಡ್​​ಶೀಟ್​ ವ್ಯಾಪಾರಿಗಳಿಗೆ ಸಣ್ಣ ಪುಟ್ಟ ಗಾಯಗಳಾಗಿವೆ. ಗಾಯಾಳುಗಳಿಗೆ ಶಿರಾಳಕೊಪ್ಪ ಸರ್ಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗಿದೆ.

ಹಂದಿಗೆ ಇಡಲು ತಂದಿದ್ದ ಸಿಡಿಮದ್ದು ಸ್ಪೋಟಗೊಂಡಿದೆ ಎನ್ನಲಾಗಿದೆ. ಶಿರಾಳಕೊಪ್ಪ ಸಂತೆಗೆ ಆಗಮಿಸಿದ್ದ ಉಮೇಶ್‌ ಮತ್ತು ರೂಪ ದಂಪತಿ ಬೆಡ್‌ ಶೀಟ್‌ ಖರೀದಿಸಿದ್ದರು. ಸಂತೆಯಲ್ಲಿದ್ದ ಅಂಗಡಿಯೊಂದರ ಮಾಲೀಕ ಅಂಥೋನಿ ದಂಪತಿಗೆ ಪರಿಚಯವಿದ್ದ. ಈ ಹಿನ್ನೆಲೆ ತಮ್ಮ ಬಳಿ ಇದ್ದ ಬ್ಯಾಗನ್ನು ಅಂಗಡಿಯಲ್ಲಿ ಇಟ್ಟು ಸಂತೆಗೆ ಹೋಗಿದ್ದರು. ಕೆಲವು ಹೊತ್ತಿನ ಬಳಿಕ ಬ್ಯಾಗಿನಲ್ಲಿದ್ದ ವಸ್ತು ಸ್ಪೋಟಗೊಂಡಿದೆ. ಆರೋಪಿಗಳ ಕುರಿತು ಮಾಹಿತಿ ಲಭ್ಯವಾಗಿದ್ದು ಅವರ ವಿಚಾರಣೆ ಮಾಡಲಾಗುತ್ತದೆ. ಇನ್ನು ಗಾಯಾಳುವಿಗೆ ಚಿಕಿತ್ಸೆ ನೀಡಲಾಗಿದೆ. ಆತಂಕ ಪಡುವ ಅಗತ್ಯವಿಲ್ಲ ಎಂದು ಶಿವಮೊಗ್ಗ ಎಪ್ಫಿ ಮಿಥುನ್ ಕುಮಾರ್ ಹೇಳಿದ್ದಾರೆ. ಘಟನೆಯಿಂದ ಕೆಲ ಹೊತ್ತು ಸ್ಥಳದಲ್ಲಿ ಆತಂಕದ ವಾತಾವರಣ ನಿರ್ಮಾಣವಾಗಿತ್ತು. ಶಿರಾಳಕೊಪ್ಪ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

LEAVE A REPLY

Please enter your comment!
Please enter your name here