ವಿಸ್ತಾರ ವಿಮಾನ ತುರ್ತು ಭೂಸ್ಪರ್ಶ-ವಿಮಾನದಲ್ಲಿ ಪ್ರಯಾಣಿಸುತ್ತಿದ್ದ ನಟಿಯರಾದ ರಶ್ಮಿಕಾ ಮಂದಣ್ಣ ಮತ್ತು ಶ್ರದ್ಧಾ ದಾಸ್-ಸಾವಿನಿಂದ ತಪ್ಪಿಸಿಕೊಂಡಿದ್ದೇವೆ ಎಂದು ಸಂದೇಶ ಹಂಚಿಕೊಂಡ ರಶ್ಮಿಕಾ

ಮಂಗಳೂರು(ಮುಂಬಯಿ): ನಟಿ ರಶ್ಮಿಕಾ ಮಂದಣ್ಣ ಸಂಚರಿಸುತ್ತಿದ್ದ ವಿಮಾನದಲ್ಲಿ ತಾಂತ್ರಿಕ ದೋಷ ಕಂಡುಬಂದ ಹಿನ್ನೆಲೆಯಲ್ಲಿ ತುರ್ತು ಭೂಸ್ಪರ್ಶ ಮಾಡಿದೆ. ಈ ಘಟನೆ ಬಗ್ಗೆ ಸ್ವತಃ ರಶ್ಮಿಕಾ ಅವರೇ ಪೋಟೋವೊಂದನ್ನು ಹಂಚಿಕೊಂಡಿದ್ದಾರೆ.

ರಶ್ಮಿಕಾ ಮಂದಣ್ಣ ಅವರು ಅವರು ಮುಂಬಯಿನಿಂದ – ಹೈದರಾಬಾದ್ ಗೆ ತೆರಳುತ್ತಿದ್ದರು. ಈ ಸಮಯದಲ್ಲಿ ಅವರು ಸಂಚರಿಸುತ್ತಿದ್ದ ವಿಸ್ತಾರ ಏರ್‌ ವಿಮಾನದಲ್ಲಿ ತಾಂತ್ರಿಕ ದೋಷ ಕಂಡು ಬಂದಿದೆ. ಈ ಹಿನ್ನೆಲೆಯಲ್ಲಿ 30 ನಿಮಿಷಗಳ ಬಳಿಕ ವಿಮಾನ ತುರ್ತು ಭೂಸ್ಪರ್ಶ ಮಾಡಿದೆ. ವಿಮಾನ ಮರಳಿ ಛತ್ರಪತಿ ಶಿವಾಜಿ ಇಂಟರ್ನ್ಯಾಷನಲ್ ನಿಲ್ದಾಣದಲ್ಲಿ ಭೂಸ್ಪರ್ಶ ಮಾಡಿದೆ. ಈ ಘಟನೆಯಲ್ಲಿ ಯಾರಿಗೂ ತೊಂದರೆ ಆಗಿಲ್ಲ. ಈ ಸಮಯದಲ್ಲಿ ರಶ್ಮಿಕಾ ಅವರೊಂದಿಗೆ ಸಹ ಪ್ರಯಾಣಿಕರಾಗಿ ನಟಿ ಶ್ರದ್ಧಾ ದಾಸ್ ಕೂಡ ಸಂಚರಿಸುತ್ತಿದ್ದರು. ಘಟನೆ ಬಳಿಕ ರಶ್ಮಿಕಾ ಶ್ರದ್ಧಾ ದಾಸ್ ಅವರೊಂದಿಗೆ ಫೋಟೋ ಹಂಚಿಕೊಂಡು “ಸಾವಿನಿಂದ ತಪ್ಪಿಸಿಕೊಂಡಿದ್ದೇವೆ” ಎಂದು ಬರೆದುಕೊಂಡಿದ್ದಾರೆ. ʼಅನಿಮಲ್‌ʼ ಸಿನಿಮಾದ ಯಶಸ್ಸಿನಲ್ಲಿರುವ ರಶ್ಮಿಕಾ ಸದ್ಯ ʼಪುಷ್ಪ-2ʼ ಸಿನಿಮಾದಲ್ಲಿ ಬ್ಯುಸಿಯಾಗಿದ್ದಾರೆ.

 

 

LEAVE A REPLY

Please enter your comment!
Please enter your name here