ಸಮುದ್ರ ಸ್ನಾನಕ್ಕಿಳಿದ ವ್ಯಕ್ತಿ ಹೃದಯಾಘಾತದಿಂದ ಸಾವು

ಮಂಗಳೂರು(ಸುರತ್ಕಲ್‌): ಸಮುದ್ರದಲ್ಲಿ ಸ್ನಾನ ಮಾಡುತ್ತಿದ್ದ ವೇಳೆ ಹೃದಯಾಘಾತದಿಂದಾಗಿ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಇಡ್ಯಾ ಬೀಚ್‌ ನಲ್ಲಿ ಫೆ.21ರಂದು ಸಂಭವಿಸಿದೆ. ಮೃತಪಟ್ಟವರನ್ನು ಮೂಲತಃ ಕುಳಾಯಿ ನಿವಾಸಿ ಅಸ್ಗರ್ (32) ಎಂದು ಗುರುತಿಸಲಾಗಿದೆ.

ಚಾಲಕ ವೃತ್ತಿ ಮಾಡುತ್ತಿದ್ದ ಅಸ್ಗರ್ ಬುಧವಾರ ಮಧ್ಯಾಹ್ನ ಇಡ್ಯಾ ಮಸೀದಿ ಸಮೀಪದ ಬೀಚ್‌ ನಲ್ಲಿ ಸ್ನಾನಕ್ಕೆಂದು ಬಂದಿದ್ದರು ಎನ್ನಲಾಗಿದೆ. ಇವರು ಸಮುದ್ರದಲ್ಲಿ ಸ್ನಾನ ಮಾಡುತ್ತಿದ್ದ ವೇಳೆ ಹೃದಯಾಘಾತಕ್ಕೊಳಗಾಗಿ ಮೃತಪಟ್ಟಿದ್ದಾರೆ. ಸುರತ್ಕಲ್‌ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.

 

LEAVE A REPLY

Please enter your comment!
Please enter your name here