ನವಿಲುಗರಿಗಳ ಹಿಡಿದು ಆಳ ಸಮುದ್ರದಲ್ಲಿ ಶ್ರೀ ಕೃಷ್ಣನ ದ್ವಾರಕ ದರ್ಶನ ಮಾಡಿದ ಪ್ರಧಾನಿ ಮೋದಿ

ಮಂಗಳೂರು/ದ್ವಾರಕ : ಸ್ಕೂಬಾ ಡೈವಿಂಗ್ ಮೂಲಕ ಪ್ರಧಾನ ಮಂತ್ರಿ ನರೇಂದ್ರ ಮೋದಿಯವರು ಆಳ ಸಮುದ್ರಕ್ಕಿಳಿದು ಶ್ರೀಕೃಷ್ಣನ ದ್ವಾರಕ ದರ್ಶನ ಮಾಡಿದ್ದಾರೆ. ನವಿಲು ಗರಿಗಳನ್ನು ಸಮುದ್ರದೊಳಗೆ ಒಯ್ದು ಶ್ರೀ ಕೃಷ್ಣನಿಗೆ ಸಮರ್ಪಿಸಿದ ಪ್ರಧಾನಿ ಮೋದಿ ವಿಶೇಷ ಪ್ರಾರ್ಥನೆ ಸಲ್ಲಿಸಿದ್ದಾರೆ.

ಗುಜರಾತ್ ಪ್ರವಾಸದ ಎರಡನೇ ದಿನದಂದು ಪ್ರಧಾನಿ ನರೇಂದ್ರ ಮೋದಿ ಕೃಷ್ಣನ ದ್ವಾರಕೆ ಯನ್ನು ಕಣ್ತುಂಬಿಕೊಳ್ಳಲು ನವಿಲುಗರಿಗಳ ಹಿಡಿದು ಸಮುದ್ರದಾಳಕ್ಕೆ ಇಳಿದಿದ್ದಾರೆ. ಮುಳುಗಡೆಯಾಗಿರುವ ದ್ವಾರಕಾನಗರಕ್ಕೆ ತೆರಳಿ ಪ್ರಾರ್ಥನೆ ಸಲ್ಲಿಸಿದ್ದಾರೆ. ನೀರಿನಲ್ಲಿ ಮುಳುಗಿರುವ ದ್ವಾರಕಾ ನಗರದಲ್ಲಿ ಪ್ರಾರ್ಥನೆ ಸಲ್ಲಿಸುವುದು ಬಹಳ ದೈವಿಕ ಅನುಭವವಾಗಿದೆ. ಆಧ್ಯಾತ್ಮಿಕ ವೈಭವ ಮತ್ತು ಶಾಶ್ವತ ಭಕ್ತಿಯ ಪ್ರಾಚೀನ ಯುಗಕ್ಕೆ ನಾನು ಸಂಪರ್ಕ ಹೊಂದಿದ್ದೇನೆ. ಶ್ರೀ ಕೃಷ್ಣನು ನಮ್ಮೆಲ್ಲರನ್ನು ಆಶೀರ್ವದಿಸಲಿ ಎಂದು ಬೇಡಿಕೊಂಡಿರುವುದಾಗಿ ಅವರು ಹೇಳಿದ್ದಾರೆ. ಈ ಅನುಭವವು ಭಾರತದ ಆಧ್ಯಾತ್ಮಿಕ ಮತ್ತು ಐತಿಹಾಸಿಕ ಬೇರುಗಳಿಗೆ ಅಪರೂಪದ ಮತ್ತು ಆಳವಾದ ಸಂಪರ್ಕ ನೀಡಿದೆ ಎಂದು ಅವರು ಎಕ್ಸ್ ನಲ್ಲಿ ಬರೆದುಕೊಂಡಿದ್ದಾರೆ.

ವೀಡಿಯೋಗಾಗಿ ಇಲ್ಲಿ ಕ್ಲಿಕ್‌ ಮಾಡಿ:

 

LEAVE A REPLY

Please enter your comment!
Please enter your name here