ಆಂದ್ರ ಟು ಕೇರಳ – ಪೆರ್ಲದಲ್ಲಿ ಒಂದು ಕ್ವಿಂಟಾಲ್ ಗಾಂಜಾ ಸಹಿತ ಇಬ್ಬರ ಬಂಧನ

ಮಂಗಳೂರು/ಪೆರ್ಲ: ಪಿಕಪ್ ವ್ಯಾನ್ ನಲ್ಲಿ ಸಾಗಿಸುತ್ತಿದ್ದ ಸುಮಾರು ಒಂದು ಕ್ವಿಂಟಾಲ್ ಗಾಂಜಾವನ್ನು ಅಬಕಾರಿ ದಳದ ವಿಶೇಷ ತಂಡ ಪೆರ್ಲದಲ್ಲಿ ವಶಪಡಿಸಿಕೊಂಡಿದ್ದು, ಇಬ್ಬರನ್ನು ಬಂಧಿಸಿದ್ದಾರೆ. ಬಂಧಿತ ಆರೋಪಿಗಳನ್ನು ಕುಂಬಳೆ ಶಾಂತಿಪಳ್ಳದ ಶಹೀನ್ ರಹೀಂ(36) ಮತ್ತು ಪೆರ್ಲ ಅಮ್ಮೆಕ್ಕಳದ ಶರೀಫ್(32) ಎಂದು ಗುರುತಿಸಲಾಗಿದೆ.

ಅಬಕಾರಿ ದಳದ ಸಿಬ್ಬಂದಿಗೆ ಲಭಿಸಿದ ಖಚಿತ ಮಾಹಿತಿಯಂತೆ ಪೆರ್ಲ ಬಳಿ ವಾಹನ ತಪಾಸಣೆ ನಡೆಸುತ್ತಿದ್ದಾಗ ಈ ದಾರಿಯಾಗಿ ಬಂದ ಪಿಕಪ್ ವ್ಯಾನ್ ಅನ್ನು ತಡೆದು ತಪಾಸಣೆ ನಡೆಸಿದಾಗ ಬಚ್ಚಿಟ್ಟು ಸಾಗಿಸುತ್ತಿದ್ದ ಸುಮಾರು 107 ಕಿಲೋ ಗಾಂಜಾ ಪತ್ತೆಯಾಗಿದೆ. ಆಂಧ್ರ ಪ್ರದೇಶದಿಂದ ಬೆಂಗಳೂರು ಮೂಲಕ ಈ ಗಾಂಜಾವನ್ನು ಕೇರಳಕ್ಕೆ ಸಾಗಿಸಲಾಗುತ್ತಿತ್ತು ಎಂದು ಅಬಕಾರಿ ದಳದ ಸಿಬ್ಬಂದಿ ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here