ಬೆಳ್ಳಾರೆ ಠಾಣಾ ವ್ಯಾಪ್ತಿಯ ಕುಲಾಯಿತೋಡು ಮನೆಯೊಂದಕ್ಕೆ ಎನ್.ಐ.ಎ ಅಧಿಕಾರಿಗಳ ದಿಢೀರ್ ದಾಳಿ

ಮಂಗಳೂರು(ಬೆಳ್ಳಾರೆ): ಎಣ್ಮೂರು ಸಮೀಪದ ಕಲ್ಲೇರಿಯ ಕುಲಾಯಿತೋಡು ಎಂಬಲ್ಲಿನ ಮನೆಯೊಂದಕ್ಕೆ ಎನ್‌ಐಎ ಅಧಿಕಾರಿಗಳ ತಂಡ ಇಂದು(ಮಾ.5) ಬೆಳ್ಳಂಬೆಳಗ್ಗೆ ದಾಳಿ ನಡೆಸಿದೆ.

ಬೆಳ್ಳಾರೆ ಠಾಣಾ ವ್ಯಾಪ್ತಿಯ ಎಣ್ಮೂರು ಸಮೀಪದ ಕುಲಾಯಿತೋಡಿನ ಈ ಮನೆಯ ಕೊಠಡಿಯೊಂದರಲ್ಲಿ ಬಾಡಿಗೆಗೆ ವಾಸವಿದ್ದ ಕೇರಳ ಮೂಲದ ವ್ಯಕ್ತಿಯ ವಿಚಾರಣೆ ನಡೆಸಿರುವುದಾಗಿ ಹೇಳಲಾಗಿದೆ. ಬಿಜು ಅಬ್ರಹಾಂ ಎಂಬ ಕೇರಳ ಮೂಲದ ವ್ಯಕ್ತಿಯನ್ನು ಪ್ರಕರಣವೊಂದಕ್ಕೆ ಸಂಬಂಧಿಸಿದಂತೆ ಶಸ್ತ್ರಾಸ್ತ್ರ ಕಾಯ್ದೆಯನ್ವಯ ವಿಚಾರಣೆ ನಡೆಸಲಾಗಿದೆ ಎನ್ನುವ ಮಾಹಿತಿ ಲಭ್ಯವಾಗಿದೆ.

ಲಷ್ಕರ್‌ ಏ ತೊಯ್ಬಾ ಭಯೋತ್ಪಾದಕ ಖೈದಿಗಳ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಷ್ಟ್ರೀಯ ತನಿಖಾ ಸಂಸ್ಥೆ ಎನ್‌ಐಎ ಇಂದು ಕರ್ನಾಟಕ ಸೇರಿದಂತೆ 7ರಾಜ್ಯಗಳಲ್ಲಿ ದಾಳಿ ನಡೆಸಿದೆ.

 

LEAVE A REPLY

Please enter your comment!
Please enter your name here