ಹಿರಿಯ ಲೇಖಕ, ಪತ್ರಕರ್ತ ನಾಗರಾಜ ಪೂವಣಿ ನಿಧನ

ಮಂಗಳೂರು(ಬೆಳ್ತಂಗಡಿ): ಹಿರಿಯ ಲೇಖಕ, ಪ್ರಾಧ್ಯಾಪಕ, ಪತ್ರಕರ್ತ ನಾಗರಾಜ ಪೂವಣಿ (‘ನಾ’ಉಜಿರೆ) ಇಂದು ಸ್ವಗೃಹದಲ್ಲಿ ನಿಧನರಾದರು. 80 ವರ್ಷದ ಪೂವಣಿ ಅಲ್ಪಕಾಲದ ಅಸೌಖ್ಯದಿಂದ ಇಂದು ಮುಂಜಾನೆ ನಿಧನರಾದರು.

ತಾಲೂಕಿನ ಹಿರಿಯ ಸಾಹಿತಿಯಾಗಿ ಸಾಹಿತ್ಯ ಕ್ಷೇತ್ರಕ್ಕೆ ಅಪಾರ ಕೊಡುಗೆ ನೀಡಿದ್ದ ಪೂವಣಿ, ಉದಯವಾಣಿ ಪತ್ರಿಕೆಯಲ್ಲಿ ಹಲವಾರು ವರ್ಷಗಳ ಕಾಲ ವರದಿಗಾರರಾಗಿ ಸೇವೆ ಸಲ್ಲಿಸಿದ್ದರು. ಶಿಕ್ಷಕರಾಗಿ ಹಿಂದಿ ಹಾಗೂ ಕನ್ನಡ ಭಾಷೆಯಲ್ಲಿ ಉತ್ತಮ ಪಾಂಡಿತ್ಯ ಹೊಂದಿದ್ದ ಇವರಿಗೆ ಸಾಹಿತ್ಯ ಕ್ಷೇತ್ರದಲ್ಲಿ ಹಲವು ಪ್ರಶಸ್ತಿ ಗೌರವಗಳು ಲಭಿಸಿದೆ. ಮೃತರು ಪತ್ನಿ, ಪುತ್ರನನ್ನು ಅಗಲಿದ್ದಾರೆ.

LEAVE A REPLY

Please enter your comment!
Please enter your name here