ಸರಪಾಡಿ ಅಲ್ಲಿಪಾದೆ ನಿವಾಸಿ ವಿನೋದ್ ಕುಮಾರ್ ಆತ್ಮಹತ್ಯೆಗೆ ಶರಣು

ಮಂಗಳೂರು(ಬಂಟ್ಟಾಳ): ಸರಪಾಡಿ ಗ್ರಾಮದ ಪೆರ್ಲ ಅಲ್ಲಿಪಾದೆ ನಿವಾಸಿ ಕೃಷ್ಣಪ್ಪ ನಾಯ್ಕ ಇವರ ಮಗ ವಿನೋದ ಕುಮಾರ್ (33) ಮಾ.10ರ ತಡರಾತ್ರಿ ಮನೆಯಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬೆಳಕಿಗೆ ಬಂದಿದೆ.

ಬಂಟ್ವಾಳ ಸರಕಾರಿ ಆಸ್ಪತ್ರೆಗೆ ಸಂಸದ ನಳಿನ್ ಕುಮಾರ್ ಕಟೀಲ್ , ಹರಿಕೃಷ್ಣ ಬಂಟ್ವಾಳ ಮೃತರ ಮನೆಗೆ ಭೇಟಿ ನೀಡಿ ಘಟನೆಯ ಬಗ್ಗೆ ವಿವರ ಪಡೆದು, ಮನೆ ಮಂದಿಗೆ ಸಾಂತ್ವನ ಹೇಳಿದ್ದಾರೆ. ಇನ್ನು ಸಾವಿಗೆ ನಿಖರ ಕಾರಣ ತಿಳಿದು ಬಂದಿಲ್ಲ. ಮೃತರು‌ ತಂದೆ, ತಾಯಿ, ಓರ್ವ ಸಹೋದರ ಮತ್ತು ಸಹೋದರಿಯನ್ನು ಅಗಲಿದ್ದಾರೆ.

LEAVE A REPLY

Please enter your comment!
Please enter your name here