ಬಂಟ್ವಾಳದ ವಗ್ಗ ಬಳಿ ಭೀಕರ ಅಪಘಾತ-ಕಾರು ಚಾಲಕ ಗಂಭೀರ-ಆಸ್ಪತ್ರೆಗೆ ದಾಖಲು

ಮಂಗಳೂರು(ಬಂಟ್ವಾಳ): ಬಂಟ್ವಾಳದ ವಗ್ಗ ಸಮೀಪ ಇಂದು(ಮಾ.17) ಬೆಳಿಗ್ಗೆ ಕೆ ಎಸ್ ಆರ್ ಟಿ ಸಿ ಬಸ್ ಹಾಗೂ ಮಾರುತಿ ಬಲೇನೋ ಕಾರುಗಳ ನಡುವೆ ಅಪಘಾತ ಸಂಭವಿಸಿದೆ. ಅಪಘಾತದಲ್ಲಿ ಕಾರು ಚಾಲಕ ಗಂಭೀರವಾಗಿ ಗಾಯಗೊಂಡಿದ್ದಾರೆ. ಸ್ಥಳೀಯರ ನೆರವಿನಿಂದ ಕಾರಿನ ಬಾಗಿಲು ಮುರಿದು ಚಾಲಕನನ್ನು ಹೊರ ತೆಗೆಯಲಾಗಿದ್ದು ಗಂಭೀರವಾಗಿ ಗಾಯಗೊಂಡಿದ್ದ ಕಾರು ಚಾಲಕನನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.

ಕೆ ಎಸ್ ಆರ್ ಟಿ ಸಿ ಬಸ್ಸು ಮಂಗಳೂರು ಕಡೆಯಿಂದ ಧರ್ಮಸ್ಥಳ ಕಡೆಗೆ ಸಾಗುತ್ತಿದ್ದು – ಮಾರುತಿ ಬಲೇನೋ ಕಾರು ಬೆಳ್ತಂಗಡಿ ದಿಕ್ಕಿನಿಂದ ಮಂಗಳೂರು ಕಡೆಗೆ ಸಾಗುವಾಗ ಮುಖಾಮುಖಿ ಡಿಕ್ಕಿಯಾಗಿದೆ. ಹೆಚ್ಚಿನ ಮಾಹಿತಿ ಇನ್ನಷ್ಟೇ ಲಭ್ಯವಾಗಬೇಕಿದೆ. ಅಪಘಾತದ ತೀವ್ರತೆಗೆ ಮಾರುತಿ ಕಾರು ಸಂಪೂರ್ಣ ನಜ್ಜುಗುಜ್ಜಾಗಿದೆ.

 

LEAVE A REPLY

Please enter your comment!
Please enter your name here