ದೌರ್ಜನ್ಯ ಖಂಡಿಸಿ ದ.ಕ ಕಲಾವಿದರಿಂದ ಸಭೆ-ಜಿಲ್ಲಾಧಿಕಾರಿಗೆ ಮನವಿ

ಮಂಗಳೂರು: ಸಾಮಾಜಿಕ ಜಾಲತಾಣದಲ್ಲಿ ಕಲಾವಿದರ ಮೇಲೆ ನಡೆಯುತ್ತಿರುವ ದಬ್ಬಾಳಿಕೆ, ದೌರ್ಜನ್ಯವನ್ನು ಖಂಡಿಸಿದ ಕಲಾವಿದರು ಡಾನ್ ಬಾಸ್ಕೋ ಹಾಲ್ ನಲ್ಲಿ ಸಭೆ ನಡೆಸಿದರು, ಸಭೆಯಲ್ಲಿ ಕಲಾವಿದರು ತಮ್ಮ ಮೇಲಾಗುತ್ತಿರುವ ಅನ್ಯಾಯವನ್ನು ಖಂಡಿಸಿ ಸೂಕ್ತ ಕ್ರಮ ಕೈಗೊಳ್ಳುವಂತೆ ಜಿಲ್ಲಾಧಿಕಾರಿಗೆ ಮನವಿ ಸಲ್ಲಿಸಿದರು. ಜಿಲ್ಲಾಧಿಕಾರಿ ಕಚೇರಿವರೆಗೆ ಶಾಂತಿಯುತ ಕಾಲ್ನಡಿಗೆ ಜಾಥಾ ಆಯೋಜಿಸಲಾಗಿದ್ದರೂ ನೀತಿಸಂಹಿತೆ ಜಾರಿ ಹಿನ್ನೆಲೆಯಲ್ಲಿ ಅನುಮತಿ ನಿರಾಕರಿಸಲಾಯಿತು.

ಇದರಿಂದಾಗಿ ಡೋನ್ ಬಾಸ್ಕ ಹಾಲ್ ನಲ್ಲಿ ಸಭೆ ನಡೆಸಿದ ಕಲಾವಿದರು‌ ತಮ್ಮ ಮೇಲಾಗುತ್ತಿರುವ ದೌರ್ಜನ್ಯದ ವಿರುದ್ಧ ಚರ್ಚೆ ನಡೆಸಿ ಸಹಿ ಸಂಗ್ರಹಿಸಿ ಜಿಲ್ಲಾಧಿಕಾರಿ ಗೆ ಮನವಿ ಸಲ್ಲಿಸಿದರು. ಸಭೆಯಲ್ಲಿ ಜಿಲ್ಲೆಯ ರಂಗಭೂಮಿಯ ಹಿರಿಯ ಕಲಾವಿದರಾದ ವಿಜಯ್‌ ಕುಮಾರ್‌ ಕೊಡಿಯಾಲ್‌ ಬೈಲ್‌, ಕಿಶೋರ್ ಡಿ ಶೆಟ್ಟಿ, ದೇವದಾಸ್‌ ಕಾಪಿಕಾಡ್‌ ಸೇರಿದಂತೆ ನೂರಾರು ಕಲಾವಿದರು ಭಾಗವಹಿಸಿದ್ದರು.

LEAVE A REPLY

Please enter your comment!
Please enter your name here