ರಸ್ತೆ ದಾಟುತ್ತಿದ್ದ ಬಾಲಕನಿಗೆ ದ್ವಿಚಕ್ರ ವಾಹನ ಡಿಕ್ಕಿ

ಮಂಗಳೂರು(ಬೆಳ್ತಂಗಡಿ): ರಸ್ತೆ ದಾಟುತ್ತಿದ್ದ ಬಾಲಕನಿಗೆ ದ್ವಿಚಕ್ರ ವಾಹನ ಡಿಕ್ಕಿ ಹೊಡೆದ ಘಟನೆ ಬೆಳ್ತಂಗಡಿ ತಾಲೂಕು ಕಸ್ಬಾ ಗ್ರಾಮದ ಚರ್ಚ್ ಕ್ರಾಸ್ ಎಂಬಲ್ಲಿ ನಡೆದಿದೆ.

ಪ್ರಣಿತ್ ಶೆಟ್ಟಿ (10)ಎಂಬ ಬಾಲಕ ಮನೆಯಿಂದ ಶಾಲೆಗೆ ನಡೆದುಕೊಂಡು ಹೋಗುತ್ತಾ, ರಸ್ತೆ ದಾಟುತ್ತಿದ್ದ ವೇಳೆ ಗುರುವಾಯನಕೆರೆ ಕಡೆಯಿಂದ ಉಜಿರೆ ಕಡೆಗೆ ಹೋಗುತ್ತಿದ್ದ (ಏಂ 03 ಇಂ 3907) ದ್ವಿಚಕ್ರ ವಾಹನ ಬಾಲಕನಿಗೆ ಢಿಕ್ಕಿ ಹೊಡೆದಿದೆ. ಪರಿಣಾಮ ಬಾಲಕ ರಸ್ತೆಗೆ ಬಿದ್ದು ಗಾಯಗೊಂಡಿದ್ದು, ಗುರುವಾಯನಕೆರೆ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದುಕೊಂಡಿದ್ದಾರೆ. ಇನ್ನು ಈ ಬಗ್ಗೆ ಬೆಳ್ತಂಗಡಿ ಸಂಚಾರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ದ್ವಿಚಕ್ರ ವಾಹನ ಸವಾರ ಅಜಾಗರೂಕತೆಯಿಂದ ಚಾಲನೆ ಮಾಡಿದ್ದೇ ಅಪಘಾತಕ್ಕೆ ಕಾರಣ ಎಂದು ಬಾಲಕನ ತಂದೆ ಹೇಮಚಂದ್ರ ಎಂಬವರು ದೂರಿನಲ್ಲಿ ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here