ಲೋಕಸಭಾ ಚುನಾವಣೆ: ಬಿಜೆಪಿ ಏಳನೇ ಪಟ್ಟಿ ಬಿಡುಗಡೆ-ಚಿತ್ರದುರ್ಗದಿಂದ ಗೋವಿಂದ್ ಕಾರಜೋಳ ಸ್ಪರ್ಧೆ

ಮಂಗಳೂರು: ಲೋಕಸಭಾ ಚುನಾವಣೆಗೆ ಬಿಜೆಪಿ ಏಳನೇ ಪಟ್ಟಿ ಬಿಡುಗಡೆಗೊಳಿಸಿದ್ದು, ಕರ್ನಾಟಕದ ಚಿತ್ರದುರ್ಗ ಲೋಕಸಭಾ ಕ್ಷೇತ್ರಕ್ಕೆ ಬಿಎಸ್ ಯಡಿಯೂರಪ್ಪ ಅವರ ಆಪ್ತ, ಮಾಜಿ ಉಪಮುಖ್ಯಮಂತ್ರಿ ಗೋವಿಂದ್ ಕಾರಜೋಳ ಅವರಿಗೆ ಟಿಕೆಟ್ ನೀಡಿದೆ. ಇದರೊಂದಿಗೆ ಕರ್ನಾಟಕದ ಎಲ್ಲಾ 28 ಕ್ಷೇತ್ರಗಳಿಗೂ ತನ್ನ ಅಭ್ಯರ್ಥಿಗಳನ್ನು ಘೋಷಣೆ ಮಾಡಿದಂತಾಗಿದೆ.

ಹಾಲಿ ಸಂಸದ, ಕೇಂದ್ರ ಸಚಿವರಾಗಿದ್ದ ನಾರಾಯಣಸ್ವಾಮಿ ಅವರಿಗೆ ಟಿಕೆಟ್ ಮಿಸ್ ಆಗಿದೆ. ಚಿತ್ರದುರ್ಗ ಹಾಲಿ ಬಿಜೆಪಿ ಸಂಸದ ನಾರಾಯಣ ಸ್ವಾಮಿ ಅವರು ಈ ಬಾರಿ ಮತ್ತೊಮ್ಮೆ ಸ್ಪರ್ಧಿಸಲು ಸಿದ್ಧರಾಗಿದ್ದರು. ಜನಾರ್ದನ ಸ್ವಾಮಿ ಅವರಿಗೆ ಟಿಕೆಟ್ ಸಿಗುತ್ತೆ ಎನ್ನುವ ಸುದ್ದಿ ಕೂಡಾ ಹಬ್ಬಿತ್ತು. ಅಂತಿಮವಾಗಿ ಮಾಜಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪರವರ ಆಪ್ತ, ಬಾಗಲಕೋಟೆ ಮೂಲದ ಗೋವಿಂದ ಕಾರಜೋಳ ಅವರಿಗೆ ಚಿತ್ರದುರ್ಗ ಟಿಕೆಟ್ ನೀಡಲಾಗಿದೆ.

LEAVE A REPLY

Please enter your comment!
Please enter your name here