ನಿರ್ಮಾಣ ಹಂತದಲ್ಲೇ ಕುಸಿದ ತಾರೀಬಾಗಿಲು ಸೇತುವೆ-ಟ್ರಕ್, ಜೆಸಿಬಿ ಜಖಂ

ಮಂಗಳೂರು(ಉತ್ತರ ಕನ್ನಡ): ಉತ್ತರ ಕನ್ನಡ ಜಿಲ್ಲೆಯ ಕುಮಟಾ ತಾಲ್ಲೂಕು ಅಘನಾಶಿನಿ ನದಿಗೆ ಅಡ್ಡಲಾಗಿ ನಿರ್ಮಿಸಲಾಗುತ್ತಿದ್ದ ಸೇತುವೆಯ ಸ್ಲ್ಯಾಬ್‌ ಕುಸಿತವಾಗಿದೆ.

ಈ ವೇಳೆ ಸೇತುವೆ ಕೆಳಗಿದ್ದ ಟ್ರಕ್ ಹಾಗೂ ಜೆಸಿಬಿ ಜಖಂಗೊಂಡಿವೆ. ಕಳಪೆ ಕಾಮಗಾರಿಯಿಂದಲೇ ಸೇತುವೆ ಕುಸಿತವಾಗಿದೆ ಎಂಬ ಆರೋಪ ಕೇಳಿಬಂದಿದೆ. ಕುಮಟಾದ ಹೆಗಡೆಯ ತಾರೀಬಾಗಿಲಿನಲ್ಲಿ ಈ ಘಟನೆ ನಡೆದಿದೆ. ಕುಮಟಾದ ಹೆಗಡೆ ಮತ್ತು ಮಿರ್ಜಾನ್ ಸಂಪರ್ಕಿಸುವ ಸೇತುವೆ ಇದಾಗಿದೆ. ಪಿಲ್ಲರ್‌ಗಳ ನಡುವೆ ಸೇತುವೆಗೆ ಹಾಕಲಾಗಿದ್ದ ಸ್ಲ್ಯಾಬ್‌ಗಳು ಕುಸಿತವಾಗಿವೆ. ಅದೃಷ್ಟವಶಾತ್ ಯಾವುದೇ ಪ್ರಾಣಹಾನಿ ಸಂಭವಿಸಿಲ್ಲ. ಸೇತುವೆ ನಿರ್ಮಾಣ ಮಾಡುತ್ತಿದ್ದ ಗುತ್ತಿಗೆದಾರರ ವಿರುದ್ಧ ಸ್ಥಳೀಯರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

 

LEAVE A REPLY

Please enter your comment!
Please enter your name here