ಆತ್ಮಹತ್ಯೆಗೆ ಯತ್ನಿಸಿದ್ದ ತಮಿಳುನಾಡು ಸಂಸದ ಗಣೇಶಮೂರ್ತಿ ನಿಧನ

ಮಂಗಳೂರು(ಚೆನ್ನೈ): ತಮಿಳುನಾಡಿನ ಈರೋಡ್‌ನ ಹಾಲಿ ಲೋಕಸಭಾ ಸಂಸದ ಎ.ಗಣೇಶಮೂರ್ತಿ ಗುರುವಾರ(ಮಾ.28) ಬೆಳಗ್ಗೆ ಹೃದಯಾಘಾತದಿಂದ ನಿಧನರಾಗಿದ್ದಾರೆ.

ಎಂಡಿಎಂಕೆ ನಾಯಕ ಕೀಟನಾಶಕ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದರು. ಮಾ.24 ರಂದು ಗಂಭೀರ ಸ್ಥಿತಿಯಲ್ಲಿದ್ದ ಅವರನ್ನು ಈರೋಡ್‌ನ ಆಸ್ಪತ್ರೆಗೆ ಸಾಗಿಸಲಾಗಿತ್ತು. ಪ್ರಾಥಮಿಕ ತಪಾಸಣೆಯ ನಂತರ ಅವರನ್ನು ಐಸಿಯುಗೆ ದಾಖಲಿಸಲಾಗಿತ್ತು. ಬಳಿಕ ಅವರನ್ನು ಸಮೀಪದ ಕೊಯಮತ್ತೂರಿನ ಖಾಸಗಿ ಆಸ್ಪತ್ರೆಗೆ ಸ್ಥಳಾಂತರಿಸಲಾಯಿತು. ಇಂದು ಮುಂಜಾನೆ 5:05 ರ ಹೊತ್ತಿಗೆ ಹೃದಯಾಘಾತವಾಗಿ ಕೊನೆಯುಸಿರೆಳೆದಿದ್ದು, ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ಕಳುಹಿಸಲಾಗಿದೆ.

ಗಣೇಶಮೂರ್ತಿ ಅವರು 2019ರಲ್ಲಿ ಡಿಎಂಕೆಯ ಸಂಸದರಾಗಿ ಲೋಕಸಭೆಗೆ ಆಯ್ಕೆಯಾಗಿದ್ದರು. 1998ರಲ್ಲಿ ಪಳನಿ ಹಾಗೂ 2009ರಲ್ಲಿ ಈರೋಡ್ ಲೋಕಸಭೆ ಚುನಾವಣೆಯಲ್ಲಿ ಗೆಲುವು ದಾಖಲಿಸಿದ್ದರು.

LEAVE A REPLY

Please enter your comment!
Please enter your name here