ಎಸ್ಎಸ್ಎಲ್​ಸಿ ಪರೀಕ್ಷೆ ವೇಳೆ ವಿದ್ಯಾರ್ಥಿಗಳ ಮಾರಾಮಾರಿ-ಗಲಾಟೆಯಲ್ಲಿ ಮೂವರಿಗೆ ಚಾಕು ಇರಿತ

ಮಂಗಳೂರು(ಬೆಂಗಳೂರು): ಎಸ್ಎಸ್ಎಲ್​ಸಿ ಪರೀಕ್ಷೆ ವೇಳೆ ಅಪ್ರಾಪ್ತ ವಿದ್ಯಾರ್ಥಿಗಳ ನಡುವೆ ಮಾರಾಮಾರಿ ನಡೆದು, ಮೂವರು ವಿದ್ಯಾರ್ಥಿಗಳಿಗೆ ಚಾಕು ಇರಿದ ಘಟನೆ ಬೆಂಗಳೂರಿನ ರಾಗಿಗುಡ್ಡ ಬಳಿ ಮಾ.27ರಂದು ನಡೆದಿದೆ.

ನಿನ್ನೆ ಎಸ್ಎಸ್ಎಲ್​ಸಿ ಪರೀಕ್ಷೆ ಬರೆಯಲು ಬಂದ ವೇಳೆ ಈ ದುರ್ಘಟನೆ ನಡೆದಿದ್ದು, ಬೇರೆ ಬೇರೆ ಏರಿಯಾದಿಂದ ವಿದ್ಯಾರ್ಥಿಗಳು ರಾಗಿಗುಡ್ಡದ ಪರೀಕ್ಷಾ ಕೇಂದ್ರವಾದ ಖಾಸಗಿ ಶಾಲೆಗೆ ಬಂದಿದ್ದರು. ಈ ವೇಳೆ ಕ್ಷುಲ್ಲಕ ವಿಚಾರಕ್ಕೆ ರಾಗಿಗುಡ್ಡ ಮತ್ತು ಸಾರಕ್ಕಿ ಏರಿಯಾ ವಿದ್ಯಾರ್ಥಿಗಳ ನಡುವೆ ಗಲಾಟೆ ಶುರುವಾಗಿದೆ. ಬಳಿಕ ಪರೀಕ್ಷೆ ಮುಗಿಸಿಕೊಂಡು ಹೋಗುವಾಗ ಮತ್ತೆ ಜಗಳವಾಗಿದ್ದು, ಗಲಾಟೆಯಲ್ಲಿ ಸಾರಕ್ಕಿಯ ಮೂವರು ವಿದ್ಯಾರ್ಥಿಗಳಿಗೆ ರಾಗಿ ಗುಡ್ಡದ ವಿದ್ಯಾರ್ಥಿಗಳು ಚಾಕು ಇರಿದಿದ್ದಾರೆ. ಈ ಕುರಿತು ಜೆಪಿ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು ಮಾಡಲಾಗಿದೆ.

LEAVE A REPLY

Please enter your comment!
Please enter your name here