17ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿಯನ್ನು ಬಂಧಿಸಿದ ಬಂಟ್ವಾಳ ಪೊಲೀಸರು

ಮಂಗಳೂರು(ಬಂಟ್ವಾಳ): ಬಂಟ್ವಾಳ ನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದ ಪ್ರಕರಣದ ಆರೋಪಿಯಾದ, ಬಂಟ್ವಾಳ ತಾಲೂಕು, ಕುಕ್ಕಾಜೆ ಮಂಚಿ ಗ್ರಾಮದ, ಕಂಚಿಲ ಮನೆ ನಿವಾಸಿ ಅಬುಸಾಲಿ ಎಂಬಾತನನ್ನು ಬಂಟ್ವಾಳ ನಗರ ಠಾಣೆ ಪೊಲೀಸರು ವಶಕ್ಕೆ ಪಡೆದಿದ್ದಾರೆ.

ಸರಿ-ಸುಮಾರು 17 ವರ್ಷಗಳಿಂದ ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದ ಈತನನ್ನು ಮಾ29 ರಂದು ಬಂಟ್ವಾಳ ನಗರ ಠಾಣಾ ಪೊಲೀಸ್ ಉಪ ನಿರೀಕ್ಷಕ ರಾಮಕೃಷ್ಣ ರವರ ನೇತ್ರತ್ವದಲ್ಲಿ ಹೆಚ್ ಸಿ ರಾಜೇಶ್ ಎಸ್, ಹೆಚ್ ಸಿ ಗಣೇಶ್ ಏನ್ ರವರುಗಳ ತಂಡ ಬೆಳ್ತಂಗಡಿ ತಾಲೂಕಿನ ಸಂತೆಕಟ್ಟೆ ಎಂಬಲ್ಲಿ ದಸ್ತಗಿರಿ ಮಾಡಿದೆ. ಬಂಟ್ವಾಳ ನ್ಯಾಯಾಲಯಕ್ಕೆ ಆರೋಪಿಯನ್ನು ಹಾಜರುಪಡಿಸಲಾಗಿದೆ.

LEAVE A REPLY

Please enter your comment!
Please enter your name here