ಬಿಜೆಪಿ ಜತೆ ಸಮನ್ವಯ ಸಭೆ ಬಳಿಕ ಜೆಡಿಎಸ್ ಅಭ್ಯರ್ಥಿಗಳ ಅಧಿಕೃತ ಪಟ್ಟಿ ಪ್ರಕಟ

ಮಂಗಳೂರು (ಬೆಂಗಳೂರು): ಬಿಜೆಪಿ ಜೊತೆಗಿನ ಸಮನ್ವ ಸಭೆ ಬಳಿಕ ಜೆಡಿಎಸ್​ ತನ್ನ ಮೂರು ಕ್ಷೇತ್ರಗಳಿಗೆ ಅಭ್ಯರ್ಥಿಗಳನ್ನು ಘೋಷಣೆ ಮಾಡಿದೆ. ಸಾಮಾಜಿಕ ಜಾಲತಾಣದಲ್ಲಿ ಜೆಡಿಎಸ್‌ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ ಮಾಡಲಾಗಿದೆ.
ನಿರೀಕ್ಷೆಯಂತೆ ಹಾಸನದಿಂದ ಪ್ರಜ್ವಲ್ ರೇವಣ್ಣ ಅವರಿಗೆ ಟಿಕೆಟ್ ನೀಡಲಾಗಿದೆ. ಇನ್ನು ಮಂಡ್ಯದಿಂದ ಮಾಜಿ ಸಿಎಂ ಎಚ್‌.ಡಿ.ಕುಮಾರಸ್ವಾಮಿ ಸ್ಪರ್ಧಿಸುತ್ತಿದ್ದಾರೆ. ಕೋಲಾರದಲ್ಲಿ ಮಲ್ಲೇಶ್‌ ಬಾಬುಗೆ ಟಿಕೆಟ್‌ ನೀಡಲಾಗಿದೆ.

ಇತ್ತೀಚೆಗೆ ನಡೆದ ಜೆಡಿಎಸ್‌ ಕೋರ್‌ ಕಮಿಟಿ ಸಭೆಯಲ್ಲಿ ಅಭ್ಯರ್ಥಿಗಳನ್ನು ಅಂತಿಮ ಮಾಡಲಾಗಿತ್ತು. ಆದರೆ, ಕಾರಣಾಂತರಗಳಿಂದ ಪಟ್ಟಿ ಘೋಷಣೆ ಮುಂದೂಡಿಕೆಯಾಗಿತ್ತು. ಇದೀಗ ಮಾಜಿ ಸಿಎಂ ಎಚ್‌ಡಿಕೆ ಅವರು, ಜೆಡಿಎಸ್‌ ಅಭ್ಯರ್ಥಿಗಳ ಪಟ್ಟಿಯನ್ನು ಬಿಡುಗಡೆ ಮಾಡುವ ಮೂಲಕ ಕಾರ್ಯಕರ್ತರ ಕುತೂಹಲಕ್ಕೆ ತೆರೆ ಎಳೆದಿದ್ದಾರೆ. ಕೋಲಾರ ಕ್ಷೇತ್ರದಲ್ಲಿ ಮುಳಬಾಗಿಲು ಶಾಸಕ ಸಮೃದ್ಧಿ ಮಂಜುನಾಥ, ಬಂಗಾರಪೇಟೆ ವಿಧಾನಸಭೆ ಚುನಾವಣೆಯ ಪರಾಜಿತ ಅಭ್ಯರ್ಥಿ ಮಲ್ಲೇಶ್ ಬಾಬು, ದೇವನಹಳ್ಳಿ ಮಾಜಿ ಶಾಸಕ ನಿಸರ್ಗ ನಾರಾಯಣಸ್ವಾಮಿ ಪ್ರಬಲ ಆಕಾಂಕ್ಷಿಗಳಾಗಿದ್ದರು. ಈ ಪೈಕಿ ಸಮೃದ್ಧಿ ಮಂಜುನಾಥ್ ಹೆಸರು ಮುಂಚೂಣಿಯಲ್ಲಿತ್ತು. ಆದರೆ, ಅಂತಿಮವಾಗಿ ಮಲ್ಲೇಶ್ ಬಾಬು ಅವರಿಗೆ ಪಕ್ಷ ಮಣೆ ಹಾಕಿದೆ.

 

LEAVE A REPLY

Please enter your comment!
Please enter your name here