ಕರಾವಳಿಯಾದ್ಯಂತ ಶ್ರದ್ದಾಭಕ್ತಿಯಿಂದ ಗುಡ್ ಪ್ರೈಡೇ ಆಚರಣೆ

ಪುತ್ತೂರು/ಮಂಗಳೂರು: ಕರಾವಳಿಯಾದ್ಯಂತ ಕ್ರೈಸ್ತ ಬಾಂಧವರು ಶುಭ ಶುಕ್ರವಾರವನ್ನು ಶ್ರದ್ದಾಭಕ್ತಿಯಿಂದ ಆಚರಿಸಿದರು.


ಬಿಜೈ, ಮಿಲಾಗ್ರೀಸ್ ಸೇರಿದಂತೆ ಜಿಲ್ಲೆಯಾದ್ಯಂತ ಎಲ್ಲಾ ಚರ್ಚ್ ಗಳಲ್ಲಿ ಶುಭ ಶುಕ್ರವಾರವನ್ನು ಆಚರಿಸಲಾಯಿತು. ಜಿಲ್ಲೆಯ ಬಹುತೇಕ ಚರ್ಚ್ ಗಳಲ್ಲಿ ಏಸು ಕ್ರಿಸ್ತರ ಬಂಧನ, ಶಿಲುಬೆಯ ಮೇಲೆ ಮರಣವನ್ನಪ್ಪುವ ಘಟನೆಗಳನ್ನು ಪ್ರಸ್ತುತ ಪಡಿಸಲಾಯಿತು. ಶಿಲುಬೆಯ ಹಾದಿಯ 14 ಪ್ರಮುಖ ಘಟ್ಟಗಳನ್ನು ನೆನಪಿಸಿ ಧ್ಯಾನಿಸಿ ಪ್ರಾರ್ಥನೆ ನಡೆಸಲಾಯಿತು. ಮಾ.31ರಂದು ಈಸ್ಟರ್‌ ಹಬ್ಬ ಆಚರಿಸಲಾಗುತ್ತದೆ.

LEAVE A REPLY

Please enter your comment!
Please enter your name here