ನ್ಯೂಸ್‌ ಇನ್‌ ಭ್ರೀಫ್‌-ಸಂಕ್ಷಿಪ್ತ ಸಮಾಚಾರ

ಮಂಗಳೂರು/ಬೆಂಗಳೂರು: ಮಂಡ್ಯದಲ್ಲಿ ಬಿಜೆಪಿ ಟಿಕಟ್‌ ಕೈ ತಪ್ಪಿರುವ ಹಿನ್ನೆಲೆಯಲ್ಲಿ ಹಾಲಿ ಸಂಸದೆ ಸುಮಲತಾ ಬೆಂಗಳೂರಿನ ಜೆಪಿ ನಗರದಲ್ಲಿರುವ ತನ್ನ ನಿವಾಸದಲ್ಲಿ ಬೆಂಬಲಿಗರ ಸಭೆ ನಡೆಸಿದ್ದು, ತನ್ನ ನಿರ್ಧಾರ ಏನು ಎಂಬುದನ್ನು ಏ.3ರಂದು ಮಂಡ್ಯದಲ್ಲಿ ತಿಳಿಸುವುದಾಗಿ ಹೇಳಿದ್ದಾರೆ.

ಶಿವಮೊಗ್ಗ: ಲೋಕಸಭಾ ಚುನಾವಣೆಯಲ್ಲಿ ಬಂಡಾಯ ಅಭ್ಯರ್ಥಿಯಾಗಿ ನಾನು ಸ್ಪರ್ಧೆ ಮಾಡುತ್ತಿರುವುದು ಪ್ರಧಾನಿ ನರೇಂದ್ರ ಮೋದಿ ಹಾಗೂ ಕೇಂದ್ರ ಗೃಹ ಸಚಿವ ಅಮಿತ್‌ ಷಾ ಅವರಿಗೆ ಇಷ್ಟವಾಗಿರಬಹುದು ಎಂದು ಬಿಜೆಪಿ ನಾಯಕ ಕೆ ಎಸ್‌ ಈಶ್ವರಪ್ಪ ಹೇಳಿದ್ದಾರೆ.

ನವದೆಹಲಿ: ಏ.19ರ ಬೆಳಿಗ್ಗೆ 7 ಗಂಟೆಯಿಂದ ಜೂ.1ರ ಸಂಜೆ 6.30ರ ವರೆಗೆ ಲೋಕಸಭಾ ಮತ್ತು ನಾಲ್ಕು ರಾಜ್ಯ ವಿಧಾನಸಭಾ ಚುನಾವಣೆಗಳ ಚುನಾವಣೋತ್ತರ ಸಮೀಕ್ಷೆಗಳ ನಡವಳಿಕೆ, ಪ್ರಕಟಣೆ ಅಥವಾ ಪ್ರಚಾರವನ್ನು ನಿಷೇಧಿಸಿ ಚುನಾವಣಾ ಆಯೋಗ ಅಧಿಸೂಚನೆ ಹೊರಡಿಸಿದೆ.

ಚೆನ್ನಪಟ್ಟಣ: ನನ್ನ ತಂದೆ ಯೋಗಿಶ್ವರ್‌ ಅನುಮತಿಯನ್ನು ನೀಡಿ ನಿರ್ಧಾರ ತೆಗೆದುಕೊಳ್ಳಲು ಸ್ವತಂತ್ರ್ಯಳಿದ್ದಿ ಎಂದು ಹೇಳಿದ್ದು, ಶೀಘ್ರದಲ್ಲಿಯೇ ಕಾಂಗ್ರೆಸ್‌ ಪಕ್ಷವನ್ನು ಸೇರುವುದಾಗಿ ಯೋಗಿಶ್ವರ್‌ ಪುತ್ರಿ ನಿಶಾ ತಿಳಿಸಿದ್ದಾರೆ.

ಚಾಮರಾಜನಗರ: ಹನೂರು ತಾಲೂಕಿನ ಬಿ ಆರ್‌ ಟಿ ಹುಲಿ ಸಂರಕ್ಷಿತ ಪ್ರದೇಶದ ಬೈಲೂರು ಅರಣ್ಯ ವಲಯ ವ್ಯಾಪ್ತಿಯ ಕೆಕೆ ಡ್ಯಾಂ ಬಲಿ ಅರಣ್ಯಕ್ಕೆ ಬೆಂಕಿ ಬಿದ್ದಿದ್ದು ಅಪಾರ ಪ್ರಮಾಣದ ಅರಣ್ಯ ನಾಶವಾಗಿದೆ.

 

 

LEAVE A REPLY

Please enter your comment!
Please enter your name here