ಗುಜರಿ ವ್ಯಾಪಾರಿಗೆ ಇರಿದು ಕೊಲೆ ಯತ್ನ – ಗಾಯಾಳು ಆಸ್ಪತ್ರೆಗೆ ದಾಖಲು

ಮಂಗಳೂರು (ಉಳ್ಳಾಲ): ಗುಜರಿ ವ್ಯಾಪಾರ ಮಾಡುತ್ತಿದ್ದ ವ್ಯಕ್ತಿಗೆ ಚೂರಿಯಿಂದ ಇರಿದು ಕೊಲೆ ಮಾಡಲು ಯತ್ನಿಸಿದ ಘಟನೆ ನಡೆದಿದೆ.  ಗಾಯಾಳುವನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.

ಉಳ್ಳಾಲ ಠಾಣಾ ವ್ಯಾಪ್ತಿಯ ಮಹಾತ್ಮಗಾಂಧಿ ರಂಗ ಮಂದಿರ ಬಳಿ ಈ ಘಟನೆ ನಡೆದಿದ್ದು ಹಣಕಾಸಿನ ವ್ಯವಹಾರಕ್ಕೆ ಸಂಬಂಧಿಸಿದ ವಿಚಾರಕ್ಕೆ ಚೂರಿಯಿಂದ ಇರಿದು ಕೊಲೆಗೆ ಯತ್ನಿಸಲಾಗಿದೆ ಎನ್ನಲಾಗಿದೆ.
ಮೂಲತಃ ತಣ್ಣೀರು ಬಾವಿ ನಿವಾಸಿ ಇದೀಗ ಉಳ್ಳಾಲದಲ್ಲಿರುವ ಮೊಹಮ್ಮದ್ ಜಾವೇದ್ ಚೂರಿಯಿಂದ ಇರಿದು ಕೊಲೆಗೆ ಯತ್ನಿಸಿದ ಆರೋಪಿ ಎಂದು ಪೊಲೀಸರು ತಿಳಿಸಿದ್ದಾರೆ. ಈತ ಪಂಜಿಮೊಗೊರು ನಿವಾಸಿ ಗುಜರಿ ವ್ಯಾಪಾರಿ ಹಮೀದ್ ಎಂಬಾತನನ್ನು ಮನೆಗೆ ಕರೆದುಕೊಂಡು ಕೊಲೆ ಯತ್ನ ನಡೆಸಿದ್ದು, ಇದರಿಂದ ಗಂಭೀರ ಗಾಯಗೊಂಡ ಹಮೀದ್ ನನ್ನು ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಚೂರಿಯಿಂದ ಇರಿದು ಕೊಲೆಗೆ ಯತ್ನಿಸಿದ ಆರೋಪಿ ಜಾವೇದ್ ಪರಾರಿಯಾಗಿದ್ದಾನೆ ಎಂದು ತಿಳಿದು ಬಂದಿದೆ.ಈ ಬಗ್ಗೆ ಹಮೀದ್ ನೀಡಿದ ದೂರಿನಂತೆ ಪ್ರಕರಣ ದಾಖಲಿಸಿಕೊಂಡ ಪೊಲೀಸರು ಆರೋಪಿಯ ಪತ್ತೆಗಾಗಿ ಬಲೆ ಬೀಸಿದ್ದಾರೆ

LEAVE A REPLY

Please enter your comment!
Please enter your name here