ಕಾಂಗ್ರೆಸ್ ಸರ್ಕಾರ ಬಂದ ಮೇಲೆ ಹೊಸ ಯೋಜನೆಯ ಭೂಮಿ ಪೂಜೆ ನಡೆದಿಲ್ಲ-ಶಾಸಕ ಡಾ.ಭರತ್‌ ಶೆಟ್ಟಿ

ಮಂಗಳೂರು: ಕಾಂಗ್ರೆಸ್ ಸರ್ಕಾರ ಬಂದ ಮೇಲೆ ಹೊಸ ಯೋಜನೆಯ ಒಂದೇ ಒಂದು ಭೂಮಿ ಪೂಜೆ ನಡೆದಿಲ್ಲ. ಕಳೆದ ಬಿಜೆಪಿ ಸರ್ಕಾರದ ಅವಧಿಯಲ್ಲಿ ಮಾಡಿದ ಯೋಜನೆಗಳನ್ನೇ ಉದ್ಘಾಟನೆ ಮಾಡುತ್ತಿದ್ದಾರೆಯೇ ವಿನಹ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಒಂದೇ ಒಂದು ಹೊಸ ಯೋಜನೆ ತಂದಿಲ್ಲ ಎಂದು ಮಂಗಳೂರು ಉತ್ತರ ಶಾಸಕ ಡಾ.ಭರತ್‌ ಶೆಟ್ಟಿ ಆರೋಪಿಸಿದ್ದಾರೆ.

ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಶಾಸಕ ಭರತ್‌ ಶೆಟ್ಟಿ, ಬರಗಾಲದ ಸಮಸ್ಯೆ ಎದುರಾಗುತ್ತಿದ್ದರು ಅದನ್ನು ನಿರ್ವಹಣೆ ಮಾಡದೆ ಕೇಂದ್ರ ಸರ್ಕಾರದ ಮೇಲೆ ಕಾಂಗ್ರೆಸ್ ಸರ್ಕಾರ ಗೂಬೆಕೂರಿಸುತ್ತಿದೆ. ಕಾಂಗ್ರೆಸ್ ನವರು ಎಸ್‌ಡಿಪಿಐ ಜೊತೆ ಸೇರಿ ಚುನಾವಣೆಯನ್ನು ಎದುರಿಸುತ್ತಿದ್ದಾರೆ. ಈ ಕಾರಣದಿಂದಲೇ ಎಸ್ಡಿಪಿಐ ಈ ಬಾರಿ ಅಭ್ಯರ್ಥಿಯನ್ನು ಕಣಕ್ಕೆ ಇಳಿಸಿಲ್ಲ. ಇಬ್ಬರೂ ಒಪ್ಪಂದ ಮಾಡಿಕೊಂಡಿದ್ದಾರೆ ಎಂದು ಆರೋಪಿಸಿದ್ದಾರೆ.

LEAVE A REPLY

Please enter your comment!
Please enter your name here