ಹಿಂದೂ ಯುವಸೇನೆಯ ಮುಖಂಡನಿಗೆ ಸ್ನೇಹಿತನಿಂದ ಚೂರಿ ಇರಿತ

ಮಂಗಳೂರು(ಬಂಟ್ವಾಳ): ಹಿಂದೂ ಸಂಘಟನೆಯ ಮುಖಂಡನೋರ್ವನಿಗೆ ಸ್ನೇಹಿತನೇ ಚೂರಿಯಿಂದ ಇರಿದ ಘಟನೆ ಬಂಟ್ವಾಳದಲ್ಲಿ ಭಾನುವಾರ(ಎ.14) ರಾತ್ರಿ ನಡೆದಿದೆ. ಹಿಂದೂ ಯುವಸೇನೆಯ ಮುಖಂಡ ಉದ್ಯಮಿಯಾಗಿರುವ ಪುಷ್ಪರಾಜ್ ಎಂಬವರಿಗೆ ಜಕ್ರಿಬೆಟ್ಟು ಎಂಬಲ್ಲಿ ಚೂರಿ ಇರಿತವಾಗಿದೆ. ಇರಿತಕ್ಕೆ ಸ್ಪಷ್ಟವಾದ ಕಾರಣ ತಿಳಿದುಬಂದಿಲ್ಲ.

ರಿಕ್ಷಾದಲ್ಲಿ ಜತೆಯಾಗಿ ತೆರಳುತ್ತಿದ್ದಾಗಲೇ ಸ್ನೇಹಿತ ರವಿ ಎಂಬಾತ ಚೂರಿಯಿಂದ ಕುತ್ತಿಗೆಗೆ ಇರಿದಿದ್ದಾನೆ ಎಂದು ಹೇಳಲಾಗಿದೆ. ಗಂಭೀರವಾಗಿ ಗಾಯಗೊಂಡಿರುವ ಪುಷ್ಪರಾಜ್ ರನ್ನು ಮಂಗಳೂರು ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಮೂಲಗಳು ತಿಳಿಸಿವೆ. ಆರೋಪಿ ರವಿ ಚೂರಿ ಇರಿದು ಪರಾರಿಯಾಗಿದ್ದಾನೆ. ಬಂಟ್ವಾಳ ನಗರ ಠಾಣಾ ಪೋಲೀಸರು ಸ್ಥಳಕ್ಕೆ ‌ಭೇಟಿ ನೀಡಿದ್ದು ,ಪ್ರಕರಣ ದಾಖಲಿಸಿಕೊಂಡಿದ್ದಾರೆ.

LEAVE A REPLY

Please enter your comment!
Please enter your name here