ಎಎಂಆರ್‌ ಜಲಾಶಯದ ನೀರು ಕೃಷಿ, ಕೈಗಾರಿಕೆಗೆ ಬಳಕೆಗೆ ನಿಷೇಧ-ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್‌

ಮಂಗಳೂರು: ಗ್ರಾಮೀಣ ಪ್ರದೇಶಗಳಿಗೆ ಕುಡಿಯುವ ನೀರು ಪೂರೈಸುವ ಉದ್ದೇಶಕ್ಕಾಗಿ ಬಿಳಿಯೂರು ಜಲಾಶಯದಿಂದ ಎಎಂಆರ್‌ ಜಲಾಶಯಕ್ಕೆ ನೀರು ಹರಿಸಲಾಗುತ್ತಿದೆ. ಕೃಷಿ ಮತ್ತು ಕೈಗಾರಿಕೆಗಳಿಗೆ ಎಎಂಆರ್‌ ಜಲಾಶಯದ ನೀರು ಬಳಕೆಯನ್ನು ನಿಷೇಧಿಸಲಾಗಿದೆ ಎಂದು ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್‌ ತಿಳಿಸಿದ್ದಾರೆ.

ಗ್ರಾಮೀಣ ಪ್ರದೇಶಗಳಿಗೆ ನೀರು ಪೂರೈಸಲು ಎಎಂಆರ್‌ ಜಲಾಶಯದಲ್ಲಿ ನೀರು ಲಭ್ಯವಾಗುವಂತೆ ನೋಡಿಕೊಳ್ಳಬೇಕಿದೆ. ಅದಕ್ಕಾಗಿ ಉಪ್ಪಿನಂಗಡಿ ಬಳಿಯ ಬಿಳಿಯೂರು ಜಲಾಶಯದಿಂದ ಎಎಂಆರ್‌ ಜಲಾಶಯಕ್ಕೆ ಗುರುವಾರ ಬೆಳಿಗ್ಗೆಯಿಂದ ನೀರು ಹರಿಸಲಾಗುತ್ತಿದೆ ಎಂದು ಅವರು ಹೇಳಿದ್ದಾರೆ.ಜಿಲ್ಲೆಯ ನಾಗರಿಕರು ನೀರನ್ನು ಮಿತವಾಗಿ ಬಳಸಬೇಕು. ಮಳೆ ಸುರಿಯುವವರೆಗೂ ಕೃಷಿ ಮತ್ತು ಕೈಗಾರಿಕೆಯವರು ಸಹಕಾರ ನೀಡಬೇಕು ಎಂದು ಅವರು ಮನವಿ ಮಾಡಿದ್ದಾರೆ.

LEAVE A REPLY

Please enter your comment!
Please enter your name here