ಬೀಚ್ ಅಲೆಗೆ ಸಿಲುಕಿ ಕೊಚ್ಚಿ ಹೋದ ಮೂವರು- ಓರ್ವ ಸಾವು ,ಇಬ್ಬರು ಗಂಭೀರ

ಮಂಗಳೂರು(ಮಲ್ಪೆ): ಮಲ್ಪೆ ಬೀಚ್ ಗೆ ಪ್ರವಾಸಕ್ಕೆ ಬಂದಿದ್ದ ತಂಡದಲ್ಲಿದ್ದ ಮೂವರು ಸಮುದ್ರದ ಅಲೆಗಳ ಸೆಳೆತಕ್ಕೆ ಕೊಚ್ಚಿಹೋಗಿದ್ದು ,ಈ ಪೈಕಿ ಓರ್ವ ಮೃತಪಟ್ಟಿದ್ದು, ಇಬ್ಬರನ್ನು ರಕ್ಷಣೆ ಮಾಡಿದ ಘಟನೆ ಮಲ್ಪೆ ಬೀಚ್ ನಲ್ಲಿ ಸಂಭವಿಸಿದೆ.

ಮೃತರನ್ನು ಹಾಸನ ಜಿಲ್ಲೆಯ ಬೇಲೂರು ನಿವಾಸಿ ಗಿರೀಶ್ ಎಂದು ಗುರುತಿಸಲಾಗಿದೆ. ಸಂತೋಷ್ ಹಾಗೂ ಮತ್ತೊಬ್ಬರನ್ನು ರಕ್ಷಿಸಲಾಗಿದ್ದು, ಮಣಿಪಾಲ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಬೇಲೂರಿನಿಂದ 20 ಜನರು ಮಲ್ಪೆ ಬೀಚ್ ಗೆ ಪ್ರವಾಸಕ್ಕೆ ಬಂದಿದ್ದರು. ಸಮುದ್ರಕ್ಕಿಳಿದು ಸ್ನಾನ ಮಾಡುತ್ತಿದ್ದಾಗ ಮೂವರು ಅಲೆಗಳ ಸೆಳೆತಕ್ಕೆ ಕೊಚ್ಚಿಹೋಗಿದ್ದಾರೆ. ತಕ್ಷಣವೇ ಸ್ಥಳಕ್ಕೆ ದೌಡಾಯಿಸಿದ ಮುಳುಗು ತಜ್ಞ ಈಶ್ವರ್ ಮಲ್ಪೆ ಹಾಗೂ ತಂಡದವರು ಮೂವರನ್ನು ರಕ್ಷಿಸಿ, ದಡಕ್ಕೆ ತಂದಿದ್ದಾರೆ. ಮೂವರ ಪೈಕಿ ಗಂಭೀರ ಸ್ಥಿತಿಯಲ್ಲಿದ್ದ ಗಿರೀಶ್ ಅವರು ಆಸ್ಪತ್ರೆಗೆ ಸಾಗಿಸುವ ದಾರಿ ಮಧ್ಯೆ ಕೊನೆಯುಸಿರೆಳೆದಿದ್ದಾರೆ. ಇಬ್ಬರನ್ನು ರಕ್ಷಿಸಿಲಾಗಿದ್ದು, ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

LEAVE A REPLY

Please enter your comment!
Please enter your name here