ಬೆಳ್ಳಂಬೆಳಿಗ್ಗೆ ಭೀಕರ ಅಪಘಾತ-ಬೈಕ್ ಸವಾರನ ತಲೆ ಮೇಲೆ ಹರಿದ ಲಾರಿ-ಸ್ಥಳದಲ್ಲೇ ಸಾವು

ಮಂಗಳೂರು: ನಗರದಲ್ಲಿ ಇಂದು ಬೆಳ್ಳಂಬೆಳಿಗ್ಗೆ ಭೀಕರ ಅಪಘಾತ ಸಂಭವಿಸಿದೆ. ಕೆಎ19 ಹೆಚ್‌ಎಂ 1816 ನಂಬರ್‌ ನ ಬೈಕ್ ಮತ್ತು ಲಾರಿ ನಡುವೆ ಅಪಘಾತ ಸಂಭವಿಸಿ ಯುವಕನೋರ್ವ ಸ್ಥಳದಲ್ಲೇ ಮೃತಪಟ್ಟಿದ್ದಾನೆ. ಮಂಗಳೂರಿನ ರಾಷ್ಟ್ರೀಯ ಹೆದ್ದಾರಿಯ ಕೊಟ್ಟಾರ ಚೌಕಿ ಬಳಿ ಕೋಡಿಕಲ್‌ ಕ್ರಾಸ್‌ ರಸ್ತೆಯಲ್ಲಿ ಈ ದುರಂತ ನಡೆದಿದೆ.

ಘಟನೆಯಿಂದ ಮಂಗಳೂರಿಗೆ ಕೆಲಸಕ್ಕೆಂದು ಬರುತ್ತಿದ್ದ್ ಬೈಕ್ ಸವಾರ ರಸ್ತೆಗೆ ಎಸೆಯಲ್ಪಟ್ಟಿದ್ದು, ಆತನ ತಲೆಯ ಮೇಲಿಂದ ಲಾರಿಯ ಚಕ್ರ ಹರಿದು ಆತ ಸ್ಥಳದಲ್ಲೇ ಮೃತಪಟ್ಟಿದ್ದಾನೆ ಎಂದು ತಿಳಿದು ಬಂದಿದೆ. ‌ಉತ್ತರ ಠಾಣೆಯ ಸಂಚಾರ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿ ಮುಂದಿನ ಕ್ರಮ ಕೈಗೊಂಡಿದ್ದಾರೆ. ಘಟನೆಗೆ ಸಂಬಂಧಿಸಿದ ಹೆಚ್ಚಿನ ಮಾಹಿತಿಗಾಗಿ ನಿರೀಕ್ಷಿಸಲಾಗಿದೆ.

LEAVE A REPLY

Please enter your comment!
Please enter your name here