ಹುಬ್ಬಳ್ಳಿಯಲ್ಲಿ ಮುಗ್ದ ಹಿಂದೂ ಹೆಣ್ಣುಮಗಳ ಹತ್ಯೆಗೆ ಖಂಡನೆ-ಆರೋಪಿಗೆ ಗಲ್ಲು ಶಿಕ್ಷೆ ನೀಡುವಂತೆ ಬಜರಂಗದಳ ಆಗ್ರಹ

ಮಂಗಳೂರು: ಹುಬ್ಬಳ್ಳಿಯ ನಿವಾಸಿ, ಹುಬ್ಬಳ್ಳಿ ಧಾರವಾಡ ಮಹಾನಗರಪಾಲಿಕೆ ಸದಸ್ಯರಾಗಿರುವ ನಿರಂಜನ ಹಿರೇಮಠ ಅವರ ಪುತ್ರಿ, ಹುಬ್ಬಳ್ಳಿಯ ಕಾಲೇಜಿನಲ್ಲಿ ಎಂಸಿಎ ಪ್ರಥಮ ವರ್ಷದಲ್ಲಿ ವ್ಯಾಸಂಗ ಮಾಡುತ್ತಿದ್ದ ನೇಹಾ ಎಂಬ ಯುವತಿ ಪ್ರೀತಿಯನ್ನು ನಿರಾಕರಿಸಿದ ಕಾರಣಕ್ಕೆ ಫಯಾಜ್ ಕಾಲೇಜು ಕ್ಯಾಂಪಸ್ಸಿನಲ್ಲೇ ಚಾಕುವಿನಿಂದ 9 ಬಾರಿ ಇರಿದು ಕೊಲೆ ಮಾಡಿರುವ ಅಮಾನವೀಯ ಕೃತ್ಯವನ್ನು ಬಲವಾಗಿ ಖಂಡಿಸುತ್ತೇವೆ, ಆರೋಪಿಯನ್ನು ಗಲ್ಲಿಗೇರಿಸಲು ಆಗ್ರಹಿಸುತ್ತೇವೆ, ಮಡಿಕೇರಿಯಲ್ಲಿ ಬಿಜೆಪಿ ಕಾರ್ಯಕರ್ತರ ಮೇಲೆ ಕಾರು ಹತ್ತಿಸಿ ಕೊಲೆ ನಡೆಸಲಾಯಿತು, ರಾಮನವಮಿಯ ಜೈಶ್ರೀರಾಮ್ ಘೋಷಣೆ ಹಾಕಿದಕ್ಕೆ ಹಿಂದೂಗಳ ಮೇಲೆ ಹಲ್ಲೆ, ಚುನಾವಣೆಯ ಸಂಧರ್ಭದಲ್ಲಿ ಹಿಂದೂಗಳನ್ನು ಗುರಿಯಾಗಿಟ್ಟುಕೊಂಡು ಇಂತಹ ಕೃತ್ಯಗಳು ನಡೆಯುತ್ತಿದ್ದು, ರಾಜ್ಯ ಸರಕಾರದ ತುಷ್ಟಿಕರಣ ನೀತಿಯಿಂದ ಮತ್ತು ಮುಸ್ಲಿಂ ಓಲೈಕೆ ಮತ್ತು ಪರೋಕ್ಷ ಬೆಂಬಲದಿಂದ ಇಂತಹ ಕೃತ್ಯಗಳು ನಡೆಯುತ್ತಿದ್ದು, ಈ ಕೃತ್ಯಗಳ ಹಿಂದೆ ಇರುವ ಜಾಲವನ್ನು ಪತ್ತೆಹಚ್ಚಿ ತಕ್ಷಣ ಕಠಿಣ ಕಾನೂನು ಕ್ರಮ ಕೈಗೊಳ್ಳಲು ಬಜರಂಗದಳ ಆಗ್ರಿಹಸುತ್ತದೆ ಎಂದು ಪ್ರಾಂತ ಬಜರಂಗದಳ ಸಂಯೋಜಕ್ ಭುಜಂಗ ಕುಲಾಲ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here