ನಮ್ಮ ಮಕ್ಕಳ ಮೇಲೆ ಹಲ್ಲೆ, ಮಾರುಕಟ್ಟೆಗಳಲ್ಲಿ ಬಾಂಬ್​​ ಸ್ಫೋಟ-ಬೆಂಗಳೂರು ಸಮಾವೇಶದಲ್ಲಿ ಮೋದಿ ವಾಗ್ದಾಳಿ

ಮಂಗಳೂರು(ಬೆಂಗಳೂರು): ನಗರದಲ್ಲಿ ನಮ್ಮ ಮಕ್ಕಳ ಮೇಲೆ ಹಲ್ಲೆ ನಡೆಯುತ್ತಿದೆ. ಮಾರುಕಟ್ಟೆಗಳಲ್ಲಿ ಬಾಂಬ್​​ ಸ್ಪೋಟ್​ಗೊಳುತ್ತಿವೆ. ಭಜನೆ ಅಥವಾ ಕಿರ್ತನೆ ಕೇಳುವುದರಿಂದ ಕೂಡ ಹಲ್ಲೆ ಮಾಡುತ್ತಿದ್ದಾರೆ. ಇವು ಸಾಮಾನ್ಯ ಘಟನೆಗಳು ಅಲ್ಲ, ಹಾಗಾಗಿ ಈ ಕಾಂಗ್ರೆಸ್​ನಿಂದ ಆದಷ್ಟು ಅಲರ್ಟ್​ ಆಗಿರಿ ಎಂದು ಪ್ರಧಾನಿ ನರೇಂದ್ರ ಮೋದಿ ಬೆಂಗಳೂರು ಮತ್ತು ಕರ್ನಾಟಕದ ಜನರಿಗೆ ಮನವಿ ಮಾಡಿದ್ದಾರೆ. ನಗರದ ಅರಮನೆ ಮೈದಾನದಲ್ಲಿ ಭಾಷಣ ಮಾಡಿದ ಅವರು, ರಾಜ್ಯ ಕಾಂಗ್ರೆಸ್ ಸರ್ಕಾರದ ನೀತಿ ಅಪಾಯಕಾರಿಯಾಗಿದೆ ಎಂದು ವಾಗ್ದಾಳಿ ಮಾಡಿದ್ದಾರೆ.

ಬೆಂಗಳೂರು ನಗರದಲ್ಲಿ ವಾಟರ್ ಮಾಫಿಯಾ ತಲೆ ಎತ್ತಿದೆ. ನಗರದ ಜನತೆ ನೀರಿಗಾಗಿ ಪರಿತಪಿಸುತ್ತಿದ್ದಾರೆ. ಕಾಂಗ್ರೆಸ್ ಸರ್ಕಾರ ಟ್ಯಾಕ್ಸ್ ಸಿಟಿಯನ್ನು ಟ್ಯಾಂಕರ್ ಸಿಟಿ ಮಾಡಿದೆ. ಕಾಂಗ್ರೆಸ್ ಆಡಳಿತದಲ್ಲಿ ಭ್ರಷ್ಟಾಚಾರ ತಾಂಡವವಾಡುತ್ತಿದೆ ಎಂದು ಕಿಡಿಕಾರಿದ್ದಾರೆ. ಬೆಂಗಳೂರನ್ನು ಅದ್ಭುತ ನಗರವಾಗಿಸಲು ನಾವು ಪ್ರಯತ್ನಿಸುತ್ತಿದ್ದೇವೆ. ಎನ್​ಡಿಎ ಅವಧಿಯಲ್ಲಿ ತೆರಿಗೆ ಪದ್ಧತಿ ಬದಲಾವಣೆಯಾಗಿದೆ. ಜಿಎಸ್​ಟಿ ಜಾರಿ ನಂತರ ಪರೋಕ್ಷ ತೆರಿಗೆ ಹೊರೆ ತಪ್ಪಿದೆ. 2014, 2019ರ ಚುನಾವಣೆಯಲ್ಲಿ ದಾಖಲೆ ಪ್ರಮಾಣದಲ್ಲಿ ಗೆಲ್ಲಿಸಿದ್ರಿ. ಭಾರತದ ಬ್ಯಾಂಕಿಂಗ್ ವ್ಯವಸ್ಥೆ ಸಂಕಷ್ಟದಲ್ಲಿತ್ತು, ಈಗ ಬದಲಾಗಿದೆ ಎಂದರು. 21ನೇ ಶತಮಾನದಲ್ಲಿ ಭಾರತ ಅಭಿವೃದ್ಧಿ ಹೊಂದಿದ ರಾಷ್ಟ್ರವಾಗಿದೆ. ಇಡೀ ದೇಶವೇ ನನ್ನ ಪರಿವಾರವಾಗಿದೆ. ಇಂಡಿಯಾ ಮೈತ್ರಿಕೂಟಕ್ಕೆ ಅವರವರ ಕುಟುಂಬವೇ ಮುಖ್ಯವಾಗಿದೆ. ಇದೇ ಎನ್‌ ಡಿ ಎ ಮತ್ತು ಇಂಡಿಯಾ ಮೈತ್ರಿಕೂಟಕ್ಕೆ ಇರುವ ವ್ಯತ್ಯಾಸ ಎಂದು ಹೇಳಿದ್ದಾರೆ.

ಭಾರತದಲ್ಲಿ ಹೂಡಿಕೆಗೆ ಇಂದು ಹಲವು ದೇಶಗಳು ಉತ್ಸುಕವಾಗಿವೆ. ಭಾರತದ ಗೆಳೆತನ ಮಾಡಲು ಎಲ್ಲಾ ದೇಶಗಳು ಹಾತೊರೆಯುತ್ತಿವೆ. ಭಾರತ ವಿಶ್ವದ 5ನೇ ದೊಡ್ಡ ಆರ್ಥಿಕ ಶಕ್ತಿವಾಗಿ ಹೊರಹೊಮ್ಮಿದೆ. ಭಾರತ ಯಾರನ್ನೂ ಅನುಸರಿಸುತ್ತಿಲ್ಲ, ಬೇರೆಯವರು ಅನುಸರಿಸ್ತಿದ್ದಾರೆ. ದೇಶದಲ್ಲಿ ಇಷ್ಟು ದೊಡ್ಡ ಬದಲಾವಣೆ ಆಗಿದ್ದೇಗೆ ಅಂದರೆ ನಿಮ್ಮಿಂದ. ನೀವು ನೀಡಿದ ಮತದಿಂದ ದೇಶದಲ್ಲಿ ಮಹತ್ವದ ಬದಲಾವಣೆ ಆಗಿದೆ ಎಂದಿದ್ದಾರೆ. ನರೇಂದ್ರ ಮೋದಿ ವಿರುದ್ಧ ಸುಳ್ಳು ಆರೋಪ ಮಾಡಲಾಗುತ್ತಿದೆ. ಮೋದಿ ಪರಿವಾರದ ವಿರುದ್ಧ ಸುಳ್ಳು ಪ್ರಚಾರ ಮಾಡುತ್ತಿದ್ದಾರೆ. ಜನರ ಬದುಕಿನಲ್ಲಿ ಬದಲಾವಣೆ ತರಲು ನಿರಂತರವಾಗಿ ಪ್ರಯತ್ನ ಮಾಡುತ್ತೇವೆ ಎಂದು ಹೇಳಿದ್ದಾರೆ. ಜನರ ಕನಸು ನನಸು ಮಾಡುವುದೆ ನಮ್ಮ ಸಂಕಲ್ಪ. ಇದಕ್ಕಾಗಿ ಬಿಜೆಪಿ-ಜೆಡಿಎಸ್ ಒಟ್ಟಾಗಿದ್ದೇವೆ. ನಿಮ್ಮ ಕನಸೇ ನನ್ನ ಕನಸು. ನನ್ನ ಪ್ರತಿ ಕ್ಷಣ ನಿಮಗಾಗಿ, ದೇಶಕ್ಕಾಗಿ ಸಮರ್ಪಣೆ. ಇದು 24/7 ಫಾರ್ 2047 ವರೆಗೆ ನಿರಂತರ. ನನ್ನ ಒಂದು ಕೆಲಸ ಮಾಡುತ್ತೀರಾ? ಅತಿ ಹೆಚ್ಚು ಮತದಾನ ಮಾಡಿಸಿ. ನಿಮ್ಮ ಬೂತ್​​ನಲ್ಲಿ ಹೆಚ್ಚು ಲೀಡ್ ಕೊಡಿಸಿ. ಇನ್ನೊಂದು ನನ್ನ ಪರ್ಸನಲ್ ಕೆಲಸ ಮಾಡುತ್ತೀರಾ? ಮನೆಗಳಿಗೆ ಹೋಗಿ ಎಲ್ಲರಿಗೂ ನಾನು ಬಂದಿದ್ದೆ ಎಂದು ಹೇಳಿ, ನಮಸ್ಕಾರ ತಿಳಿಸಿ ಎಂದಿದ್ದಾರೆ.

LEAVE A REPLY

Please enter your comment!
Please enter your name here