ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ 400ಕ್ಕೂ ಅಧಿಕ ಕ್ಷೇತ್ರದಲ್ಲಿ ಗೆಲ್ಲಬೇಕು-ತಮಿಳುನಾಡು ಬಿಜೆಪಿ ರಾಜ್ಯಾಧ್ಯಕ್ಷ ಅಣ್ಣಾ ಮಲೈ

ಮಂಗಳೂರು: ಬಿಜೆಪಿ ಕಳೆದ ಬಾರಿ ಪ್ರಣಾಳಿಕೆಯಲ್ಲಿ ನೀಡಿದ್ದ ಎಲ್ಲಾ ಭರವಸೆಗಳನ್ನು ಈಡೇರಿಸಿದೆ.  ಈ ಬಾರಿ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ 400ಕ್ಕೂ ಅಧಿಕ ಕ್ಷೇತ್ರದಲ್ಲಿ ಗೆಲ್ಲಬೇಕು ಎಂದು ತಮಿಳುನಾಡು ಬಿಜೆಪಿ ರಾಜ್ಯಾಧ್ಯಕ್ಷ ಅಣ್ಣಾ ಮಲೈ ಹೇಳಿದ್ದಾರೆ.

ಮಂಗಳೂರಿನಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅಣ್ಣಾ ಮಲೈ, ಬ್ರಿಜೇಶ್ ಚೌಟ ಹೆಚ್ಚಿನ ಅಂತರದಲ್ಲಿ ಗೆಲುವು ಸಾಧಿಸುತ್ತಾರೆ. ಎಲ್ಲರೂ ಬಂದು ಮತ ಚಲಾಯಿಸುವಂತೆ ವಿನಂತಿ ಮಾಡಿದರು. ಕರ್ನಾಟಕದಲ್ಲಿ ಬಿಜೆಪಿ ಸರ್ಕಾರ ಇದ್ದಾಗ ಕರ್ನಾಟಕ ತಮಿಳುನಾಡು ನಡುವೆ ನೀರಿನ ಸಮಸ್ಯೆ ಇರುವುದಿಲ್ಲ. ಎರಡು ರಾಜ್ಯಕ್ಕೂ ಒಳ್ಳೆಯದಾಗಬೇಕು. ರಾಜಕೀಯ ಉದ್ದೇಶದಿಂದ ಜನ ಈ ಬಗ್ಗೆ ಮಾತನಾಡುತ್ತಾರೆ. ನೇಹಾ ಪ್ರಕರಣ ಕೇಳಿ ಶಾಕ್ ಆಯಿತು.ಒನ್ ಸೈಡ್ ಲವ್, ಕಾಂಗ್ರೆಸ್ ಮಾತನಾಡಿದ್ದು ಎಲ್ಲಾ ತಿಳಿದುಕೊಂಡಿದ್ದೇವೆ. ಕಾಂಗ್ರೆಸ್ ಸರಕಾರ ಬಂದ ಮೇಲೆ ನೇರ ಕಾನೂನು ಪಾಲನೆ ಆಗುತ್ತಿಲ್ಲ. ಗೃಹ ಸಚಿವರ ಮಾತನ್ನು ಯಾರು ಒಪ್ಪಿಕೊಳ್ಳುದಿಲ್ಲ ಎಂದು ಅಣ್ಣಾ ಮಲೈ ಹೇಳಿದ್ದಾರೆ

LEAVE A REPLY

Please enter your comment!
Please enter your name here