ದ.ಕ ಜಿಲ್ಲಾ ಬಿಜೆಪಿ ವತಿಯಿಂದ “ನವಯುಗ ನವಪಥ” ಪ್ರಣಾಳಿಕೆ ಬಿಡುಗಡೆಗೊಳಿಸಿದ ತಮಿಳುನಾಡು ಬಿಜೆಪಿ ರಾಜ್ಯಾಧ್ಯಕ್ಷ ಅಣ್ಣಾಮಲೈ-ಕರಾವಳಿ ಅಭಿವೃದ್ಧಿ ಮತ್ತು ಭದ್ರತೆ ಹೆಚ್ಚಿನ ಮಹತ್ವ-ಬ್ರಿಜೇಶ್ ಚೌಟ

ಮಂಗಳೂರು : ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರದ ಜಿಲ್ಲಾ ಬಿಜೆಪಿ ವತಿಯಿಂದ ನವ ಯುಗ ನವಪಥ ಎಂಬ ಹೆಸರಿನಲ್ಲಿ ಪ್ರಣಾಳಿಕೆಯನ್ನು ನಗರದ ಬಿಜೆಪಿ ಕಚೇರಿಯಲ್ಲಿ ತಮಿಳುನಾಡು ಬಿಜೆಪಿ ರಾಜ್ಯಾಧ್ಯಕ್ಷ ಅಣ್ಣಾಮಲೈ ಅವರು ಬಿಡುಗಡೆಗೊಳಿಸಿದರು.

ಈ ಸಂದರ್ಭದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಬಿಜೆಪಿ ಅಭ್ಯರ್ಥಿ ಬ್ರಿಜೇಶ್ ಚೌಟ, ಸಂಪರ್ಕ, ಮೂಲ ಸೌಕರ್ಯ ಅಭಿವೃದ್ಧಿಯಲ್ಲಿ ದಾಪುಗಾಲು, ಕೈಗಾರಿಕೆ ಮತ್ತು ಬಂಡವಾಳ ಆಕರ್ಷಣೆ, ಪ್ರವಾಸೋದ್ಯಮ, ರಾಣಿ ಅಬ್ಬಕ್ಕ ಹೆಸರಿನಲ್ಲಿ ಸೈನಿಕ ಶಾಲೆ ಸ್ಥಾಪನೆಗೆ ಹೆಚ್ಚಿನ ಒತ್ತು ನೀಡಲಾಗುವುದು. ಇದರ ಜೊತೆಗೆ ಕರಾವಳಿ ಅಭಿವೃದ್ಧಿ ಮತ್ತು ಭದ್ರತೆ ಹೆಚ್ಚಿನ ಮಹತ್ವ ನೀಡಲಾಗುತ್ತದೆ ಎಂದು ಹೇಳಿದ ಅವರು ಪ್ರಣಾಳಿಕೆಯಲ್ಲಿ ಇದಕ್ಕೆ ಆದ್ಯತೆ ನೀಡಲಾಗಿದೆ ಎಂದು ಹೇಳಿದರು.

ಸುದ್ದಿಗೋಷ್ಠಿಯಲ್ಲಿ ಸಂಸದ ನಳಿನ್ ಕುಮಾರ್ ಕಟೀಲ್, ಶಾಸಕರಾದ ಡಾ.ವೈ.ಭರತ್ ಶೆಟ್ಟಿ, ಡಿ.ವೇದವ್ಯಾಸ್ ಕಾಮತ್, ಜಿಲ್ಲಾಧ್ಯಕ್ಷ ಸತೀಶ್ ಕುಂಪಲ, ಮೇಯರ್ ಸುಧೀರ್ ಶೆಟ್ಟಿ ಕಣ್ಣೂರು ಸೇರಿದಂತೆ ಮೊದಲಾದವರು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here