ಮಾಜಿ ಸಂಸದ ನಳಿನ್ ಕುಮಾರ್‌ ಕಟೀಲ್‌ ಅವರಿಂದ ಆಶೀರ್ವಾದ ಪಡೆದ ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್ ಆರ್‌ ಪೂಜಾರಿ

ಮಂಗಳೂರು: ಮಂಗಳೂರಿನ ಲೇಡಿಹಿಲ್ ಅಲೋಶಿಯಸ್ ಶಾಲೆಯ ಮತಗಟ್ಟೆ ಅಚ್ಚರಿಯ ಘಟನೆಯೊಂದಕ್ಕೆ ಸಾಕ್ಷಿಯಾಯಿತು. ಇಲ್ಲಿನ ಮತಗಟ್ಟೆಗೆ  ಮತದಾನ ಮಾಡಲು ಬಂದಿದ್ದ ಮಾಜಿ ಸಂಸದ ನಳಿನ್ ಕುಮಾರ್‌ ಕಟೀಲ್‌ ಮತ್ತು ದ.ಕ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್ ಮುಖಾಮುಖಿಯಾಗಿ ನಗುಮೊಗದೊಂದಿಗೆ ಹಸ್ತಲಾಘವ ಮಾಡಿದರು.

ಈ ವೇಳೆ ಕಾಂಗ್ರೆಸ್‌ ಅಭ್ಯರ್ಥಿ ಪದ್ಮರಾಜ್ ಆರ್‌ ಪೂಜಾರಿ ಮಾಜಿ ಸಂಸದರಿಂದ ಆಶೀರ್ವಾದ ಪಡೆದು ಎಲ್ಲರ ಗಮನ ಸೆಳೆದರು. ಈ ಸನ್ನಿವೇಶಕ್ಕೆ ಸ್ಥಳದಲ್ಲಿದ್ದ ಎರಡೂ ಪಕ್ಷಗಳ ಮುಖಂಡರು, ಕಾರ್ಯಕರ್ತರು ಸಾಕ್ಷಿಯಾದರು.

LEAVE A REPLY

Please enter your comment!
Please enter your name here