ಹಾಸನ ಪೆನ್ ಡ್ರೈವ್‌ ಪ್ರಕರಣ- ʼಉಪ್ಪು ತಿಂದವರು ನೀರು ಕುಡಿಯಲೇ ಬೇಕುʼ – ಎಚ್‌ ಡಿ ಕುಮಾರಸ್ವಾಮಿ

ಮಂಗಳೂರು(ಬೆಂಗಳೂರು): ಹಾಸನದಲ್ಲಿ ಸಾವಿರಾರು ಹೆಣ್ಣು ಮಕ್ಕಳನ್ನು ಲೈಂಗಿಕವಾಗಿ ದೌರ್ಜನ್ಯ ನಡೆಸಿ ಅದನ್ನು ವಿಡಿಯೋ ಮಾಡಿಕೊಂಡಿದ್ದಾರೆ ಎಂಬ ಆರೋಪ ಎದುರಿಸುತ್ತಿರುವ ಪ್ರಜ್ವಲ್ ರೇವಣ್ಣ ಬಗ್ಗೆ ಮಾಜಿ ಮುಖ್ಯಮಂತ್ರಿ ಹಾಗೂ ಪ್ರಜ್ವಲ್ ಚಿಕ್ಕಪ್ಪ ಎಚ್‌ ಡಿ ಕುಮಾರಸ್ವಾಮಿ ಪ್ರತಿಕ್ರಿಯಿಸಿದ್ದಾರೆ.

ಬೆಂಗಳೂರಿನಲ್ಲಿ‌ ಮಾತನಾಡಿದ ಅವರು, ಸಿದ್ದರಾಮಯ್ಯ ಅವರು ಎಸ್ ಐ ಟಿಗೆ ತನಿಖೆಗೆ ಆದೇಶ ನೀಡಿದ್ದಾರೆ ಎಂಬ ಮಾಹಿತಿ ಬಂದಿದೆ. ನಾನಾಗಲಿ ನನ್ನ ತಂದೆಯಾಗಲಿ ಎಂದೂ ಹೆಣ್ಣು ಮಕ್ಕಳ ವಿಷಯವಾಗಿ ಗೌರವವಾಗಿ ನಡೆದುಕೊಂಡಿದ್ದೇವೆ ಮತ್ತು ಅವರ ಕಷ್ಟಗಳನ್ನು ಪರಿಹರಿಸಿ ಕಳಿಸಿದ್ದೇವೆ. ಎಸ್ ಐ ಟಿ ತನಿಖೆ ಸಂಪೂರ್ಣ ಬರಲಿ. ಈ ನೆಲದಲ್ಲಿ ಯಾರೇ ತಪ್ಪು ಮಾಡಿದ್ದರು ಅವರಿಗೆ ಶಿಕ್ಷೆಯಾಗಬೇಕು. ಉಪ್ಪು ತಿಂದವರು ನೀರು ಕುಡಿಯಲೇ ಬೇಕು ಎಂದು ಹೇಳಿದ್ದಾರೆ.

ಪ್ರಜ್ವಲ್ ವಿದೇಶಕ್ಕೆ ಹೋಗಿದ್ದಾರೆ ಎಂಬ ವಿಚಾರವಾಗಿ ಉತ್ತರಿಸಿದ ಅವರು, ʼಈ ವಿಚಾರಕ್ಕೂ ನಮಗೂ ಸಂಬಂಧವಿಲ್ಲ, ಪ್ರಜ್ವಲ್ ಗೂ  ಜೆಡಿಎಸ್ ಗೂ ಯಾವುದೇ ಸಂಬಂಧವಿಲ್ಲ. ಪ್ರಜ್ವಲ್ ಓಡಿ ಹೋಗಿದ್ರೆ ಎಸ್ ಐಟಿ ಕರ್ಕೊಂಡ್ ಬರತ್ತೆ ಬಿಡಿʼ ಎಂದು ಹೇಳಿದ್ದಾರೆ.

LEAVE A REPLY

Please enter your comment!
Please enter your name here