ನೀರಲ್ಲಿ ಮುಳುಗಿ ಬೆಂಗಳೂರಿನ ಐವರು ವಿದ್ಯಾರ್ಥಿಗಳ ಸಾವು

ಮಂಗಳೂರು(ಕನಕಪುರ): ಕಾವೇರಿ ನದಿ ಹರಿಯುವ ತಾಲ್ಲೂಕಿನ ಮೇಕೆದಾಟುಗೆ ಸೋಮವಾರ(ಎ.29) ಪ್ರವಾಸಕ್ಕೆ ಬಂದಿದ್ದ ಬೆಂಗಳೂರಿನ ಮೂವರು ಯುವತಿಯರು ಹಾಗೂ ಇಬ್ಬರು ಯುವಕರು ಸೇರಿ ಐವರು ವಿದ್ಯಾರ್ಥಿಗಳು ನದಿಯಲ್ಲಿ ಈಜುವಾಗ ಮುಳುಗಿ ಮೃತಪಟ್ಟಿದ್ದಾರೆ.

ಪೀಣ್ಯ ಎರಡನೇ ಹಂತದ ಹರ್ಷಿತ, ಅಭಿಷೇಕ್, ತೇಜಸ್, ವರ್ಷಾ ಹಾಗೂ ಸ್ನೇಹ ಮೃತರು. ಮೇಕೆದಾಟು ಬಳಿ ಆಳವಾದ ಜಾಗದಲ್ಲಿ ಈಜುವಾಗ ನೀರಿನ ಸೆಳೆತಕ್ಕೆ ಸಿಲುಕಿ ಮುಳುಗಿ‌ ಕೊನೆಯುಸಿರೆಳೆದಿದ್ದಾರೆ. ವಿಷಯ ತಿಳಿದು ಸ್ಥಳಕ್ಕೆ ಬಂದ ಅಗ್ನಿಶಾಮಕ ಸಿಬ್ಬಂದಿ, ಐವರ ಮೃತದೇಹಗಳನ್ನು ಹೊರಕ್ಕೆ ತೆಗೆದಿದ್ದಾರೆ. ಸಾತನೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

LEAVE A REPLY

Please enter your comment!
Please enter your name here