ರಂಗ ಸಂಗಾತಿ 16ನೇ ವಾರ್ಷಿಕೋತ್ಸವ- ರಂಗಭಾಸ್ಕರ ಪ್ರಶಸ್ತಿಗೆ ನಟ ನವೀನ್‌ ಪಡೀಲ್‌ ಆಯ್ಕೆ

ಮಂಗಳೂರು: ರಂಗಸಂಗಾತಿ ಸಾಂಸ್ಕೃತಿಕ ಪ್ರತಿಷ್ಠಾನ ವರ್ಷಂಪ್ರತಿ ಕೊಡಮಾಡುವ ರಂಗಭಾಸ್ಕರ ಪ್ರಶಸ್ತಿಗೆ ಈ ಬಾರಿ ರಂಗನಟ ನವೀನ್‌ ಡಿ. ಪಡೀಲ್‌ ಅವರನ್ನು ಆಯ್ಕೆ ಮಾಡಲಾಗಿದೆ ಎಂದು ಸಂಸ್ಥೆಯ ಅಧ್ಯಕ್ಷ ಕೆ. ಗೋಪಾಲಕೃಷ್ಣ ಶೆಟ್ಟಿ ಹೇಳಿದ್ದಾರೆ.


ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಉಡುಪಿ ವಿಶ್ವನಾಥ ಶೆಣೈ ಪ್ರಾಯೋಜಿತ, ರಂಗಕರ್ಮಿ ದಿ| ಭಾಸ್ಕರ ನೆಲ್ಲಿತೀರ್ಥ ಸ್ಮರಣಾರ್ಥ ನೀಡಲಾಗುವ ಪ್ರಶಸ್ತಿಯನ್ನು ನವೀನ್‌ ಡಿ. ಪಡೀಲ್‌ ಅವರಿಗೆ ನೀಡಲಾಗುವುದು. ದಿ| ಪಣಂಬೂರು ಜನಾರ್ದನ ರಾವ್‌ ಸ್ಮರಣಾರ್ಥ ನೀಡಲಾಗುವ ವಾರ್ಷಿಕ ರಂಗ ಪ್ರಶಸ್ತಿಯನ್ನು ಹಿರಿಯ ನಟಿ, ಬಹುಮುಖ ಪ್ರತಿಭೆ ಸಾವಿತ್ರಿ ಶ್ರೀನಿವಾಸ ರಾವ್‌ ಅವರಿಗೆ ನೀಡಲಾಗುವುದು ಎಂದು ತಿಳಿಸಿದ್ದಾರೆ. ಮೇ.3ರಂದು ಸಂಜೆ 5.30ಕ್ಕೆ ಕೆನರಾ ಪದವಿಪೂರ್ವ ಕಾಲೇಜಿನಲ್ಲಿ ನಡೆಯುವ ವಾರ್ಷಿಕೋತ್ಸವದಲ್ಲಿ ಪ್ರಶಸ್ತಿ ಪ್ರದಾನ ಮಾಡಲಾಗುವುದು. ಪತ್ರಿಕಾಗೋಷ್ಠಿಯಲ್ಲಿ ರಂಗಸಂಗಾತಿಯ ಪ್ರಮುಖರಾದ ಸುರೇಶ್‌ ಬೆಳ್ಚಡ ಕೊಳಂಬೆ, ಚಂದ್ರಶೇಖರ ಕೂಳೂರು, ರಂಜನ್‌ ಬೋಳೂರು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here