ಮದುವೆ ಸಭಾಂಗಣದ ಆವರಣದಲ್ಲಿ ವ್ಯಕ್ತಿಯ ಮೃತದೇಹ ಪತ್ತೆ

ಮಂಗಳೂರು(ಬಂಟ್ವಾಳ): ವ್ಯಕ್ತಿಯೊಬ್ಬರ ಮೃತದೇಹ ತುಂಬೆ ವಳವೂರಿನಲ್ಲಿರುವ ಮದುವೆ ಸಭಾಂಗಣವೊಂದರ ಅವರಣದಲ್ಲಿ ಪತ್ತೆಯಾಗಿದೆ.

ಮೃತರನ್ನು ಉಪ್ಪಿನಂಗಡಿ ವಳಾಲು ನಿವಾಸಿ ಸಂತೋಷ್ ಎಂದು ಗುರುತಿಸಲಾಗಿದೆ. ಮದುವೆ ಸಭಾಂಗಣದ ಕಂಪೌಂಡ್ ನ ಒಳಗಡೆಯಲ್ಲಿ ಮೃತದೇಹ ರಕ್ತಸಿಕ್ತವಾಗಿ ಬಿದ್ದುಕೊಂಡಿದ್ದು, ಹೊರಗಡೆಯಲ್ಲಿ ಆತನ ಬೈಕ್ ಪತ್ತೆಯಾಗಿದೆ. ಸಾವಿಗೆ ಸ್ಪಷ್ಟವಾದ ಕಾರಣ ತಿಳಿದುಬಂದಿಲ್ಲ. ಪೋಲೀಸ್ ಮೂಲಗಳ ಪ್ರಕಾರ ಈತ ಬೈಕ್ ನಿಲ್ಲಿಸಿ ಕಂಪೌಂಡ್ ಮೇಲೆ ಕುಳಿತುಕೊಂಡಿದ್ದು, ಆ ವೇಳೆ ನಿಯಂತ್ರಣ ಕಳೆದು ಕೆಳಗೆ ಬಿದ್ದಿರಬೇಕು ಎಂದು ಶಂಕಿಸಲಾಗಿದೆ. ಮೃತದೇಹದ ಮರಣೋತ್ತರ ಪರೀಕ್ಷೆ ಬಳಿಕವಷ್ಟೇ ಇದರ ಸತ್ಯಾಸತ್ಯತೆ ತಿಳಿಯಬಹುದಾಗಿದೆ. ಘಟನಾ ಸ್ಥಳಕ್ಕೆ ಬಂಟ್ವಾಳ ಗ್ರಾಮಾಂತರ ಪೋಲೀಸ್ ಇನ್ಪೆಕ್ಟರ್ ಶಿವಕುಮಾರ್, ಪಿಎಸ್ಐ ಹರೀಶ್ ಭೇಟಿ ನೀಡಿ ತನಿಖೆ ನಡೆಸುತ್ತಿದ್ದಾರೆ.

LEAVE A REPLY

Please enter your comment!
Please enter your name here