ಹ್ಯಾಕರ್ ಶ್ರೀಕಿ ಮತ್ತೆ ಬಂಧನ-32 ಕೋಟಿ ರೂ ಮೌಲ್ಯದ ಬಿಟ್ ಕಾಯಿನ್‌ ಕಳ್ಳತನ ಪ್ರಕರಣ

ಮಂಗಳೂರು(ಬೆಂಗಳೂರು): 60.6 ಬಿಟ್‌ ಕಾಯಿನ್ ಕಳ್ಳತನಕ್ಕೆ ಸಂಬಂಧಿಸಿದಂತೆ ತುಮಕೂರು ಸೆನ್ ಠಾಣೆಯಲ್ಲಿ ದಾಖಲಾಗಿದ್ದ ಪ್ರಕರಣದಲ್ಲಿ ಆರೋಪಿ ಶ್ರೀಕೃಷ್ಣ ಅಲಿಯಾಸ್ ಶ್ರೀಕಿಯನ್ನು ವಿಶೇಷ ತನಿಖಾ ದಳದ ಅಧಿಕಾರಿಗಳು ಬಂಧಿಸಿದ್ದಾರೆ.

ಜಯನಗರದ ಶ್ರೀಕೃಷ್ಣ, ಅಂತರರಾಷ್ಟ್ರೀಯ ಹ್ಯಾಕರ್ ಆಗಿ ಗುರುತಿಸಿಕೊಂಡಿದ್ದಾನೆ. 2017ರಂದು ತುಮಕೂರಿನ ಉನೊ ಕಾಯಿನ್ ಕಂ‍ಪನಿಯ ಸರ್ವರ್‌ನಲ್ಲಿದ್ದ 60.6 ಬಿಟ್ ಕಾಯಿನ್‌ಗಳು ಕಳ್ಳತನ ಆಗಿದ್ದವು. ಈ ಪ್ರಕರಣದಲ್ಲಿ ಶ್ರೀಕಿ ಪಾತ್ರವಿರುವ ಮಾಹಿತಿ ಇತ್ತು. ವಿಚಾರಣೆಗೆ ಹಾಜರಾಗುವಂತೆ ಶ್ರೀಕಿಗೆ ನೋಟಿಸ್ ನೀಡಲಾಗಿತ್ತು. ಆದರೆ, ಆತ ಗೈರಾಗಿದ್ದ. ಇದೇ ಕಾರಣಕ್ಕೆ ಆತನನ್ನು ಬಂಧಿಸಲಾಗಿದೆ ಎಂದು ಎಸ್‌ಐಟಿ ಮೂಲಗಳು ಹೇಳಿವೆ. ಬಿಟ್‌ ಕಾಯಿನ್ ಕಳ್ಳತನಕ್ಕೆ ಸಂಬಂಧಪಟ್ಟಂತೆ ಕಂಪನಿಯ ಸಹ‌ ಸಂಸ್ಥಾಪಕ ಬಿ.ವಿ.ಹರೀಶ್ ಅವರು ತುಮಕೂರಿನ ಸೆನ್ ಠಾಣೆಗೆ ದೂರು ನೀಡಿದ್ದರು. ಈ ಪ್ರಕರಣದ ತನಿಖೆಯನ್ನು ಎಸ್‌ಐಟಿಗೆ ವಹಿಸಲಾಗಿತ್ತು.

LEAVE A REPLY

Please enter your comment!
Please enter your name here