ಬೆಳ್ಳಂಬೆಳಿಗ್ಗೆ ಸಮುದ್ರ ಪಾಲಾಗುತ್ತಿದ್ದ ಇಬ್ಬರು ಯುವಕರ ರಕ್ಷಣೆ

ಮಂಗಳೂರು(ಮಲ್ಪೆ): ಉಡುಪಿ ತಾಲೂಕಿನ ಮಲ್ಪೆ ಸಮೀಪದ ತೊಟ್ಟಂ ಬೀಚ್ ನಲ್ಲಿ ಬೆಳ್ಳಂಬೆಳಿಗ್ಗೆ ಸಮುದ್ರ ಪಾಲಾಗುತ್ತಿದ್ದ ಇಬ್ಬರು ಯುವಕರನ್ನು ರಕ್ಷಣೆ ಮಾಡಲಾಗಿದೆ.

ಬಳ್ಳಾರಿಯ ಕೊಟ್ಟೂರು ತಾಲೂಕಿನಿಂದ ಬಂದಿದ್ದ ಯುವಕರ ತಂಡವೊಂದು ಇಂದು ಬೆಳಿಗ್ಗೆ ನೀರಿನಲ್ಲಿ ಆಟವಾಡಲು ಸಮುದ್ರಕ್ಕಿಳಿದಿತ್ತು. ಈ ವೇಳೆ ಯುವಕರ ತಂಡವು ರಕ್ಕಸ ಗಾತ್ರದ ಅಲೆಗೆ ಸಿಲುಕಿ ಒದ್ದಾಡುತ್ತಿತ್ತು. ತಕ್ಷಣ ಅಪಾಯವನ್ನು ಗಮನಿಸಿದ ಲೈಫ್ ಗಾರ್ಡ್ ಸಿಬ್ಬಂದಿ, ಗೋಪಿನಾಥ್ (25) ಮತ್ತು ರಂಗನಾಥ್ (26) ಎಂಬ ಇಬ್ಬರು ಪ್ರವಾಸಿಗರನ್ನು ರಕ್ಷಣೆ ಮಾಡಿದ್ದಾರೆ. ಮಲ್ಪೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ಸಂಭವಿಸಿದೆ.

LEAVE A REPLY

Please enter your comment!
Please enter your name here