ಪಟಾಕಿ ಕಾರ್ಖಾನೆ ಸ್ಫೋಟ-8 ಮಂದಿ ಸುಟ್ಟು ಕರಕಲು-12 ಮಂದಿಗೆ ಗಾಯ

ಮಂಗಳೂರು(ತಮಿಳುನಾಡು): ತಮಿಳುನಾಡಿನ ಶಿವಕಾಶಿ ಬಳಿಯ ಪಟಾಕಿ ಕಾರ್ಖಾನೆಯಲ್ಲಿ ಸಂಭವಿಸಿದ ಸ್ಫೋಟದಲ್ಲಿ ಎಂಟು ಮಂದಿ ದಾರುಣವಾಗಿ ಸಾವನ್ನಪ್ಪಿದ್ದಾರೆ. ಕನಿಷ್ಠ 12 ಮಂದಿಗೆ ಸುಟ್ಟ ಗಾಯಗಳಾಗಿವೆ ಎಂದು ಪೊಲೀಸರು ತಿಳಿಸಿದ್ದಾರೆ.

ಕಾರ್ಖಾನೆ ಪರವಾನಗಿ ಪಡೆದ ಘಟಕವಾಗಿದ್ದು, ಸ್ಫೋಟಕ್ಕೆ ಕಾರಣವೇನು ಎಂದು ತನಿಖೆ ನಡೆಸಲಾಗುತ್ತಿದೆ. ಗಾಯಗೊಂಡವರಲ್ಲಿ ಇಬ್ಬರ ಸ್ಥಿತಿ ಚಿಂತಾಜನಕವಾಗಿದೆ ಎನ್ನಲಾಗಿದೆ. ಅಪಘಾತ ಸ್ಥಳದಲ್ಲಿ ರಕ್ಷಣಾ ಕಾರ್ಯ ನಡೆಯುತ್ತಿದೆ. ಮೃತಪಟ್ಟ ಎಂಟು ಮಂದಿ ಪಟಾಕಿ ಕಾರ್ಖಾನೆಯಲ್ಲಿ ಕೆಲಸ ಮಾಡುತ್ತಿದ್ದರು. ಸ್ಫೋಟದ ನಂತರ ಇಡೀ ಕಾರ್ಖಾನೆಗೆ ಬೆಂಕಿ ಹೊತ್ತಿಕೊಂಡಿದೆ. ಸ್ಥಳಕ್ಕೆ ಆಗಮಿಸಿದ ಅಗ್ನಿಶಾಮಕ ದಳದ ಸಿಬ್ಬಂದಿ ಬೆಂಕಿ ನಂದಿಸುವ ಕಾರ್ಯದಲ್ಲಿ ತೊಡಗಿದ್ದಾರೆ. ಗಂಭೀರವಾಗಿ ಗಾಯಗೊಂಡ ಕಾರ್ಮಿಕರನ್ನು ಚಿಕಿತ್ಸೆಗಾಗಿ ಹತ್ತಿರದ ಆಸ್ಪತ್ರೆಗೆ ದಾಖಲಿಸಲಾಗಿದೆ.

LEAVE A REPLY

Please enter your comment!
Please enter your name here