ಹುಬ್ಬಳ್ಳಿಯಲ್ಲಿ ಯುವತಿಯನ್ನು ಇರಿದು ಬರ್ಬರ ಹತ್ಯೆ-ನೇಹಾ ಹತ್ಯೆಯನ್ನು ನೆನಪಿಸಿದ ಘಟನೆ

ಮಂಗಳೂರು(ಹುಬ್ಬಳ್ಳಿ): ನೇಹಾ ಹಿರೇಮಠ ಕೊಲೆಯ ಕಹಿ ನೆನಪು ಮಾಸುವ ಮುನ್ನವೇ ಹುಬ್ಬಳ್ಳಿಯಲ್ಲಿ ಅಂಥದ್ದೇ ಮತ್ತೊಂದು ಘಟನೆ ನಡೆದಿದೆ. ನಸುಕಿನ ಜಾವ ಸಿಹಿ ನಿದ್ದೆಯಲ್ಲಿದ್ದ ಯುವತಿಯನ್ನು ವ್ಯಕ್ತಿಯೊಬ್ಬ ಚೂರಿಯಿಂದ ಇರಿದು ಹತ್ಯೆ ಮಾಡಿದ ಭೀಕರ ಘಟನೆ ಹುಬ್ಬಳ್ಳಿಯ ಬೆಂಡಿಗೇರಿ ಪೊಲೀಸ್ ಠಾಣೆ ವ್ಯಾಪ್ತಿಯ ವೀರಾಪುರ ಓಣಿಯಲ್ಲಿ ನಡೆದಿದೆ. ಮೃತ ಯುವತಿಯನ್ನು ಅಂಜಲಿ ಅಂಬಿಗೇರ ಎಂದು ಗುರುತಿಸಲಾಗಿದ್ದು, ವಿಶ್ವ ಅಲಿಯಾಸ್ ಗಿರೀಶ್ ಎಂಬಾತ ಯುವತಿಯನ್ನು ಹತ್ಯೆ ಮಾಡಿ ಬಳಿಕ ತಲೆಮರೆಸಿಕೊಂಡಿದ್ದಾನೆ.

ನೇಹಾ ಮಾದರಿಯಲ್ಲಿ ಹತ್ಯೆ ಮಾಡುತ್ತೇನೆ ಎಂದು ಅಂಜಲಿ ಅಂಬಿಗೇರಗೆ ವಿಶ್ವ ಬೆದರಿಕೆ ಹಾಕಿದ್ದ ಎನ್ನಲಾಗಿದೆ. ಅದರಂತೆಯೇ ಬುಧವಾರ ಬೆಳಗ್ಗೆ 5.30ಕ್ಕೆ ಮನೆಗೆ ನುಗ್ಗಿ ಚಾಕುವಿನಿಂದ ಇರಿದಿದ್ದಾನೆ. ಮನೆಯವರು ತಡೆಯಲು ಮುಂದಾದರೂ ಬಿಡದೆ ಹತ್ಯೆ ಮಾಡಿ ಪರಾರಿಯಾಗಿದ್ದಾನೆ. ಈ ಹಿಂದೆ ಮೈಸೂರಿಗೆ ಬಾ ಎಂದು ಅಂಜಲಿಗೆ ವಿಶ್ವ ಧಮ್ಕಿ ಹಾಕಿದ್ದ. ಅಕಸ್ಮಾತ್ ನೀನು ನನ್ನ ಜೊತೆ ಬಾರದೆ ಹೋದರೆ ನಿರಂಜನ ಹಿರೇಮಠ ಮಗಳಿಗೆ ಆದ ಹಾಗೆಯೇ ನಿನಗೂ ಮಾಡುತ್ತೇನೆ ಎಂದು ಧಮ್ಕಿ ಹಾಕಿದ್ದ. ಈತನ ವಿರುದ್ಧ ಹಲವು ಕಳ್ಳತನ ಪ್ರಕರಣಗಳಲ್ಲಿ ಶಾಮೀಲಾದ ಆರೋಪವೂ ಇದೆ. ಜತೆಗೆ, ಬೈಕ್ ಕಳ್ಳತನದಲ್ಲಿಯೂ ಈತ ಆರೋಪಿಯಾಗಿದ್ದಾನೆ.

LEAVE A REPLY

Please enter your comment!
Please enter your name here