ಗ್ಯಾರೆಂಟಿಯನ್ನು ಸೇರಿಸಿ 1.20 ಸಾವಿರ ಕೋಟಿ ಬಜೆಟ್ ಕೊಟ್ಟಿದ್ದೇವೆ-ಮಂಗಳೂರಿನಲ್ಲಿ ಸಿಎಂ ಸಿದ್ದರಾಮಯ್ಯ

ಮಂಗಳೂರು: ಗ್ಯಾರೆಂಟಿಯನ್ನು ಸೇರಿಸಿ 1.20 ಸಾವಿರ ಕೋಟಿ ಬಜೆಟ್ ಕೊಟ್ಟಿದ್ದೇವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ.

ಮಂಗಳೂರಿನಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಸರ್ಕಾರ ಬಂದು ಒಂದು ವರ್ಷವಾಗಿದೆ. ನಾವು ಏನೇನು ಮಾಡಿದ್ದೇವೆ ಅಂತ ಜನರಿಗೆ ತಿಳಿಸಿದ್ದೇವೆ. ಬಿಜೆಪಿಯವರು ಸುಳ್ಳು ಹೇಳುತ್ತಾರೆ, ನೀವು ಸುಳ್ಳು ಹೇಳುತ್ತೀರಾ ಎಂದು. ನೀರಾವರಿಗೆ 16,000 ಕೋಟಿ ರೂ. ಇತ್ತು ಈ ವರ್ಷ 18 ಸಾವಿರ ಕೋಟಿ ಇಟ್ಟಿದ್ದೇವೆ. ಏನು ಮಾಡಿಲ್ಲ ಅಂತ ಅಂದ್ರೆ ಏನು ಹೇಳುವುದು ಎಂದು ಪ್ರಶ್ನಿಸಿದ್ದಾರೆ. ಬಿಜೆಪಿಯವರು ಬಜೆಟ್ ಓದುವುದಿಲ್ಲ ಎಕನಾಮಿಕ್ಸ್ ಗೊತ್ತಾಗುವುದಿಲ್ಲ. ಸುಳ್ಳು ಮಾತ್ರ ಹೇಳುತ್ತಾರೆ. ಅಭಿವೃದ್ಧಿ ಶೂನ್ಯ ಅಭಿವೃದ್ಧಿ ಶೂನ್ಯ ಅಂತಾರೆ. ಬಡವರಿಗೆ ಆರ್ಥಿಕವಾಗಿ ಸಫಲತೆ ಕೊಡುವುದು ಅಭಿವೃದ್ಧಿ ಅಲ್ವಾ? ದೇಶಕ್ಕೆ ರಾಜಕೀಯ ಸ್ವಾತಂತ್ರ‍್ಯ ಬಂದರೆ ಸಾಲದು. ಆರ್ಥಿಕ ಸಾಮಾಜಿಕ ಶಕ್ತಿ ಬಂದಾಗ ಮಾತ್ರ ರಾಜಕೀಯ ಸ್ವಾತಂತ್ರ‍್ಯಕ್ಕೆ ಅರ್ಥ ಬರುತ್ತದೆ ಎಂದು ಅಂಬೇಡ್ಕರ್ ಕೂಡ ಹೇಳಿದ್ದಾರೆ ಎಂದು ಹೇಳಿದ್ದಾರೆ.

 

LEAVE A REPLY

Please enter your comment!
Please enter your name here