ಮಿನಿ ಬಸ್​ಗೆ ಟ್ರಕ್ ಡಿಕ್ಕಿ-7 ಮಂದಿ ಸಾವು, 25 ಜನರಿಗೆ ಗಂಭೀರ ಗಾಯ

ಮಂಗಳೂರು(ಹರಿಯಾಣ): ಟ್ರಕ್‌ವೊಂದು ಮಿನಿ ಬಸ್​ಗೆ ಡಿಕ್ಕಿ ಹೊಡೆದ ಪರಿಣಾಮ 7 ಮಂದಿ ಮೃತಪಟ್ಟು, 25 ಜನರು ಗಂಭೀರ ಗಾಯಗೊಂಡಿರುವ ಘಟನೆ ಶುಕ್ರವಾರ(ಮೇ.24) ಬೆಳಿಗ್ಗೆ ಹರಿಯಾಣದಲ್ಲಿ ನಡೆದಿದೆ.

ಅಂಬಾಲಾ-ದೆಹಲಿ-ಜಮ್ಮು ರಾಷ್ಟ್ರೀಯ ಹೆದ್ದಾರಿಯಲ್ಲಿ ಈ ಅಪಘಾತ ಸಂಭವಿಸಿದ್ದು, ವೈಷ್ಣೋದೇವಿ ದರ್ಶನಕ್ಕೆ ತೆರಳುತ್ತಿದ್ದರು ಎಂದು ವರದಿಯಾಗಿದೆ. ಈ ಕುರಿತು ಪ್ರತಿಕ್ರಿಯಿಸಿರುವ ಅಂಬಾಲಾ ಕ್ಯಾಂಟ್‌ನ ವೈದ್ಯಕೀಯ ಅಧಿಕಾರಿ ಡಾ.ಕೌಶಲ್ ಕುಮಾರ್, ಅಪಘಾತದಲ್ಲಿ ಒಂದೇ ಕುಟುಂಬದ ಏಳು ಮಂದಿ ಮೃತಪಟ್ಟಿದ್ದು, 2 ಮಂದಿ ಗಂಭೀರವಾಗಿ ಗಾಯಗೊಂಡಿದ್ದಾರೆ. ಅಪಘಾತ ಸಂಭವಿಸಿದಾಗ ಬಸ್ಸಿನಲ್ಲಿದ್ದ ಎಲ್ಲಾ ಪ್ರಯಾಣಿಕರು ನಿದ್ರೆಯಲ್ಲಿದ್ದರು, ಎಂದು ತಿಳಿದು ಬಂದಿದೆ. ಅಪಘಾತ ಸಂಭವಿಸಿದ ವೇಳೆ ಲಾರಿ ಚಾಲಕ ಪಾನಮತ್ತನಾಗಿದ್ದ ಎಂದು ವರದಿಯಾಗಿದೆ. ಅಪಘಾತದ ಬಳಿಕ ಆತ ಪರಾರಿಯಾಗಿದ್ದು, ಪೊಲೀಸರು ಆತನಿಗಾಗಿ ಹುಡುಕಾಟ ನಡೆಸುತ್ತಿದ್ದಾರೆ. ಗಾಯಾಳುಗಳಿಗೆ ಸೂಕ್ತ ಚಿಕಿತ್ಸೆ ನೀಡಲಾಗುತ್ತಿದೆ ಎಂದು ಅಂಬಾಲಾ ಕ್ಯಾಂಟ್‌ನ ವೈದ್ಯಕೀಯ ಅಧಿಕಾರಿ ಡಾ.ಕೌಶಲ್ ಕುಮಾರ್ ತಿಳಿಸಿದ್ಧಾರೆ.

LEAVE A REPLY

Please enter your comment!
Please enter your name here