ನಗರದಲ್ಲಿ ರೌಡಿಗಳ ಗ್ಯಾಂಗ್ ವಾರ್ ಪ್ರಕರಣ – ಮತ್ತೆ ಮೂವರು ಆರೋಪಿಗಳು ವಶಕ್ಕೆ

ಮಂಗಳೂರು(ಉಡುಪಿ): ರಾಜ್ಯವನ್ನೇ ಬೆಚ್ಚಿ ಬೀಳಿಸಿದ್ದ ಉಡುಪಿಯ ಗ್ಯಾಂಗ್ ವಾರ್ ಪ್ರಕರಣಕ್ಕೆ ಸಂಬಂಧಪಟ್ಟಂತೆ ಮತ್ತೆ ಮೂವರನ್ನು ಪೊಲೀಸರು ಬಂಧಿಸಿದ್ದಾರೆ. ಉಡುಪಿ ನಗರ ಠಾಣೆ ಪೊಲೀಸರು ಕಾರ್ಯಾಚರಣೆ ನಡೆಸಿ ಮಜೀದ್, ಅಲ್ಫಾಜ್, ಶರೀಫ್‌ನನ್ನು ಬಂಧಿಸಿದ್ದಾರೆ. ಹೊಡೆದಾಟದ ವೇಳೆ ಶರೀಫ್ ತೀವ್ರವಾಗಿ ಗಾಯಗೊಂಡಿದ್ದ.

ಮೇ.19ರಂದು ಉಡುಪಿ ಮಣಿಪಾಲ ರಾಷ್ಟ್ರೀಯ ಹೆದ್ದಾರಿಯಲ್ಲಿ ಈ ಗ್ಯಾಂಗ್ ವಾರ್ ನಡೆದಿತ್ತು. ಅಡ್ಡಾದಿಡ್ಡಿ ಕಾರು ಚಲಾಯಿಸಿ ಡಿಕ್ಕಿ ಹೊಡೆದು, ತಲವಾರು ಬೀಸಿ ಭಯ ಹುಟ್ಟಿಸಿದ್ದ ಪ್ರಕರಣ ಇದಾಗಿತ್ತು. ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಮೂರು ಮಂದಿಯನ್ನು ಈ ಮೊದಲೇ ಬಂಧಿಸಿದ್ದು, ಈಗ ಮತ್ತೆ ಮೂವರ ಬಂಧನದೊಂದಿಗೆ ಬಂಧಿತ ದುಷ್ಕರ್ಮಿಗಳ ಸಂಖ್ಯೆ ಆರಕ್ಕೆ ಏರಿದೆ. ಇನ್ನಷ್ಟು ಆರೋಪಿಗಳನ್ನು ಬಂಧಿಸಲು ಪೊಲೀಸರು ಕಾರ್ಯಾಚರಣೆ ಮುಂದುವರೆಸಿದ್ದಾರೆ.

LEAVE A REPLY

Please enter your comment!
Please enter your name here