ಲವ್ ಜಿಹಾದ್ ಗೆ ಒಳಪಡುವ ಯುವತಿಯರ ರಕ್ಷಣೆಗೆ ಶ್ರೀರಾಮ ಸೇನೆಯಿಂದ 5 ಜಿಲ್ಲೆಗಳಲ್ಲಿ ಸಹಾಯವಾಣಿ

ಮಂಗಳೂರು: ಮಂಗಳೂರು, ಹುಬ್ಬಳ್ಳಿ- ಧಾರವಾಡ, ಕಲಬುರ್ಗಿ, ದಾವಣಗೆರೆ, ಬಾಗಲಕೋಟೆಯಲ್ಲಿ ಲವ್ ಜಿಹಾದ್ ಗೆ ಸಂಬಂಧಿಸಿ ಶ್ರೀರಾಮ ಸೇನೆ ಹೆಲ್ಪ್ ಲೈನ್ ಸಹಾಯವಾಣಿ ಆರಂಭಿಸಿದೆ. ರಾಜ್ಯಾದ್ಯಂತ ಆರು ಜಿಲ್ಲೆಗಳಲ್ಲಿ ಏಕಕಾಲದಲ್ಲಿ ಈ ಸಹಾಯವಾಣಿ ಉದ್ಘಾಟನೆಗೊಂಡಿದ್ದು, ಇಂದಿನಿಂದಲೇ ಕಾರ್ಯಾಚರಿಸುತ್ತಿದೆ ಎಂದು ಶ್ರೀರಾಮ ಸೇನೆ ರಾಜ್ಯ ಪ್ರಧಾನ ಕಾರ್ಯದರ್ಶಿ ಆನಂದ ಶೆಟ್ಟಿ ಅಡ್ಯಾರ್ ಹೇಳಿದ್ದಾರೆ.

ಮಂಗಳೂರಿನಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಆನಂದ ಶೆಟ್ಟಿ ಅಡ್ಯಾರ್, ಲವ್ ಜಿಹಾದ್ ಗೆ ಒಳಪಡುವ ಯುವತಿಯರು, ಮನೆಯವರು ಹಿತೈಷಿಗಳು ಈ ಸಹಾಯವಾಣಿಗೆ ಕರೆ ಮಾಡಿದರೆ ಶ್ರೀರಾಮ ಸೇನೆಯ ತಂಡ ಕಾನೂನಿನ ಮಿತಿಯಲ್ಲಿ ಸೂಕ್ತ ಕಾರ್ಯಾಚರಣೆ ನಡೆಸಲಿದೆ ಎಂದು ಹೇಳಿದರು. ಸಹಾಯವಾಣಿ ಮೊಬೈಲ್ ಸಂಖ್ಯೆ 9090443444 ಆಗಿದ್ದು, ಸಹಾಯವಾಣಿ ತಂಡದಲ್ಲಿ ಮಾಜಿ ಪೊಲೀಸ್ ಅಧಿಕಾರಿಗಳು‌, ವಕೀಲರ ತಂಡ ಇರಲಿದೆ. ಘಟನೆ ಯಾವ ಹಂತದಲ್ಲಿದೆ ಎಂಬುದನ್ನು ನೋಡಿಕೊಂಡು ಸೂಕ್ತ ಕ್ರಮವನ್ನು ಶ್ರೀರಾಮ ಸೇನೆ ಕೈಗೊಳ್ಳಲಿದೆ. ಯುವತಿಯರನ್ನು ಮಾತೃ ಧರ್ಮದಲ್ಲಿ ಉಳಿಸಲು ಪ್ರಯತ್ನಿಸಲಾಗುವುದು. ಯಾವುದೇ ಕಾರಣಕ್ಕೂ ಕಾನೂನನ್ನು ಮೀರಿ ಹೋಗಲ್ಲ ಹಾಗೂ ಅನೈತಿಕ ಪೊಲೀಸ್ ಗಿರಿ ಮಾಡಲ್ಲ ಎಂದು ಆನಂದ ಶೆಟ್ಟಿ ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here