ಯಾರಾಗ್ತಾರೆ ಪ್ರಧಾನಿ? – ಭವಿಷ್ಯ ನುಡಿದ ಭೈರವೇಶ್ವರ ಶ್ವಾನ

ಮಂಗಳೂರು(ಮೈಸೂರು): ನರೇಂದ್ರ ಮೋದಿಯವರು ಮತ್ತೊಮ್ಮೆ ಪ್ರಧಾನಿಯಾಗುತ್ತಾರೆ ಎಂದು ಮೈಸೂರಿನ ಕಾಲಬೈರವೇಶ್ವರ ದೇವಸ್ಥಾನದ ಶ್ವಾನ ಭವಿಷ್ಯ ನುಡಿದಿದೆ.
ಮೋದಿ ಹಾಗೂ ರಾಹುಲ್ ಗಾಂಧಿ ಫೋಟೋವನ್ನು ಕಾಲಭೈರವೇಶ್ವರ ದೇವರ ಮುಂದೆ ದೇವಾಲಯದ ಅರ್ಚಕ ಇಟ್ಟಿದ್ದಾರೆ. ಈ ಬಾರಿ ಯಾರು ಪ್ರಧಾನಿಯಾಗುತ್ತಾರೆ ಎಂಬುದನ್ನು ನಮ್ಮ ಭೈರವ ತಿಳುಸುತ್ತಾನೆ ಎಂದು ಅರ್ಚಕ ಪೂಜೆ ಸಲ್ಲಿಸಿದ್ದಾರೆ. ನಂತರ ಫೋಟೊವನ್ನು ಅದಲು ಬದಲು ಮಾಡಿಟ್ಟರು. ಈ ವೇಳೆ ಭೈರವೇಶ್ವರ ಶ್ವಾನವು ಮೋದಿ ಫೋಟೋವನ್ನು ಬಾಯಿಯಿಂದ ಕಚ್ಚಿಕೊಂಡು ಬಂದಿದೆ.

ಇದೇ ವೇಳೆ ಯದುವೀರ್ ಫೋಟೋ ಸೆಲೆಕ್ಟ್ ಮಾಡಿರುವ ಭೈರವೇಶ್ವರ ಶ್ವಾನ ಮೈಸೂರು-ಕೊಡಗು ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ಯದುವೀರ್ ಗೆಲ್ಲುತ್ತಾರೆಂದು ಎಂದು ಕೂಡ ಭವಿಷ್ಯ ನುಡಿದಿದೆ. ಭೈರವೇಶ್ವರ ಶ್ವಾನ ಭವಿಷ್ಯ ನುಡಿದಿರುವ ವಿಡಿಯೋ ಸಾಮಾಜಿಕ ಜಾಲಾತಾಣದಲ್ಲಿ ಫುಲ್ ವೈರಲ್ ಆಗಿದೆ. ನಾಳೆ ಮತ ಎಣಿಕೆ ಕಾರ್ಯ ನಡೆಯಲಿದ್ದು ಸಾರ್ವಜನಿಕರ ಕುತೂಹಲ ಇಮ್ಮಡಿಯಾಗಿದೆ.

LEAVE A REPLY

Please enter your comment!
Please enter your name here